ಅಬುದಾಬಿ: ಅನಿವಾಸಿ ಕನ್ನಡಿಗರ ಹೆಮ್ಮೆಯ ಬಹುದೊಡ್ಡ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಬುದಾಬಿ ಝೋನ್ ವತಿಯಿಂದ ಅಂತಾರಾಷ್ಟ್ರೀಯ ಮಿಲಾದ್ ಕಾನ್ಫರೆನ್ಸ್ ವಿಜೃಂಭಣೆಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನವೆಂಬರ್ 15 ರಂದು ಅಬುಧಾಬಿ ಸುಡಾನಿ ಸಭಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮೀಲಾದ್ ಸ್ವಾಗತ ಸಮಿತಿ ಅಧ್ಯಕ್ಷರಾದ ಹಾಜಿ ಮುಹಮ್ಮದಲಿ ವಳವೂರ್ ತಿಳಿಸಿದರು.
ಪ್ರಸ್ತುತ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಗಾರರಾಗಿ ಖ್ಯಾತ ವಾಗ್ಮಿ ,ಪ್ರಭಾಷಣ ಲೋಕದ ಮಿನುಗು ತಾರೆ, ಬಹು: ಹಾಫಿಲ್ ಮಸ್ಊದ್ ಸಖಾಫಿ ಗೂಡಲ್ಲೂರ್ ಆಗಮಿಸಿ ಹುಬ್ಬುರಸೂಲ್ ಪ್ರಭಾಷಣ ನಡೆಸಲಿದ್ದಾರೆ. ಅಸ್ಯೆಯ್ಯದ್ ಝೈನುಲ್ ಆಭೀದಿನ್ ಮುತ್ತು ಕೋಯ ತಂಙಳ್ ದುಃಅ ಆಶಿರ್ವಚನ ನಿಡಲಿದ್ದಾರೆ. ಅಲ್ಲದೆ ಕೆ.ಸಿ.ಎಫ್ ಅಬುಧಾಬಿ ಪ್ರತಿಭೆಗಳಿಂದ ಬುರ್ದಾ ಆಲಾಪನೆ,ನಅತೆ ಶರೀಫ್,ಕವ್ವಾಲಿ, ದಫ್ಫ್ ಪ್ರದರ್ಶನ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಇನ್ನೂ ಹಲವು ಧಾರ್ಮಿಕ, ಸಾಮಾಜಿಕ ಉಲಮಾ ಉಮರ ನಾಯಕರು ಆಗಮಿಸಲಿದ್ದಾರೆ ಎಂದು ಮೀಲಾದ್ ಸಮಾವೇಶ ಸ್ವಾಗತ ಸಮಿತಿ ಜನರಲ್ ಕನ್ವೀನರ್ ಅಬ್ದುಲ್ ಹಕೀಮ್ ತುರ್ಕಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…