ಅಬುದಾಬಿ: ಅನಿವಾಸಿ ಕನ್ನಡಿಗರ ಹೆಮ್ಮೆಯ ಬಹುದೊಡ್ಡ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಬುದಾಬಿ ಝೋನ್ ವತಿಯಿಂದ ಅಂತಾರಾಷ್ಟ್ರೀಯ ಮಿಲಾದ್ ಕಾನ್ಫರೆನ್ಸ್ ವಿಜೃಂಭಣೆಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನವೆಂಬರ್ 15 ರಂದು ಅಬುಧಾಬಿ ಸುಡಾನಿ ಸಭಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮೀಲಾದ್ ಸ್ವಾಗತ ಸಮಿತಿ ಅಧ್ಯಕ್ಷರಾದ ಹಾಜಿ ಮುಹಮ್ಮದಲಿ ವಳವೂರ್ ತಿಳಿಸಿದರು.
ಪ್ರಸ್ತುತ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಗಾರರಾಗಿ ಖ್ಯಾತ ವಾಗ್ಮಿ ,ಪ್ರಭಾಷಣ ಲೋಕದ ಮಿನುಗು ತಾರೆ, ಬಹು: ಹಾಫಿಲ್ ಮಸ್ಊದ್ ಸಖಾಫಿ ಗೂಡಲ್ಲೂರ್ ಆಗಮಿಸಿ ಹುಬ್ಬುರಸೂಲ್ ಪ್ರಭಾಷಣ ನಡೆಸಲಿದ್ದಾರೆ. ಅಸ್ಯೆಯ್ಯದ್ ಝೈನುಲ್ ಆಭೀದಿನ್ ಮುತ್ತು ಕೋಯ ತಂಙಳ್ ದುಃಅ ಆಶಿರ್ವಚನ ನಿಡಲಿದ್ದಾರೆ. ಅಲ್ಲದೆ ಕೆ.ಸಿ.ಎಫ್ ಅಬುಧಾಬಿ ಪ್ರತಿಭೆಗಳಿಂದ ಬುರ್ದಾ ಆಲಾಪನೆ,ನಅತೆ ಶರೀಫ್,ಕವ್ವಾಲಿ, ದಫ್ಫ್ ಪ್ರದರ್ಶನ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಇನ್ನೂ ಹಲವು ಧಾರ್ಮಿಕ, ಸಾಮಾಜಿಕ ಉಲಮಾ ಉಮರ ನಾಯಕರು ಆಗಮಿಸಲಿದ್ದಾರೆ ಎಂದು ಮೀಲಾದ್ ಸಮಾವೇಶ ಸ್ವಾಗತ ಸಮಿತಿ ಜನರಲ್ ಕನ್ವೀನರ್ ಅಬ್ದುಲ್ ಹಕೀಮ್ ತುರ್ಕಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…