ಅಬುದಾಬಿ: ಅನಿವಾಸಿ ಕನ್ನಡಿಗರ ಹೆಮ್ಮೆಯ ಬಹುದೊಡ್ಡ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಬುದಾಬಿ ಝೋನ್ ವತಿಯಿಂದ ಅಂತಾರಾಷ್ಟ್ರೀಯ ಮಿಲಾದ್ ಕಾನ್ಫರೆನ್ಸ್ ವಿಜೃಂಭಣೆಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನವೆಂಬರ್ 15 ರಂದು ಅಬುಧಾಬಿ ಸುಡಾನಿ ಸಭಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮೀಲಾದ್ ಸ್ವಾಗತ ಸಮಿತಿ ಅಧ್ಯಕ್ಷರಾದ ಹಾಜಿ ಮುಹಮ್ಮದಲಿ ವಳವೂರ್ ತಿಳಿಸಿದರು.
ಪ್ರಸ್ತುತ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಗಾರರಾಗಿ ಖ್ಯಾತ ವಾಗ್ಮಿ ,ಪ್ರಭಾಷಣ ಲೋಕದ ಮಿನುಗು ತಾರೆ, ಬಹು: ಹಾಫಿಲ್ ಮಸ್ಊದ್ ಸಖಾಫಿ ಗೂಡಲ್ಲೂರ್ ಆಗಮಿಸಿ ಹುಬ್ಬುರಸೂಲ್ ಪ್ರಭಾಷಣ ನಡೆಸಲಿದ್ದಾರೆ. ಅಸ್ಯೆಯ್ಯದ್ ಝೈನುಲ್ ಆಭೀದಿನ್ ಮುತ್ತು ಕೋಯ ತಂಙಳ್ ದುಃಅ ಆಶಿರ್ವಚನ ನಿಡಲಿದ್ದಾರೆ. ಅಲ್ಲದೆ ಕೆ.ಸಿ.ಎಫ್ ಅಬುಧಾಬಿ ಪ್ರತಿಭೆಗಳಿಂದ ಬುರ್ದಾ ಆಲಾಪನೆ,ನಅತೆ ಶರೀಫ್,ಕವ್ವಾಲಿ, ದಫ್ಫ್ ಪ್ರದರ್ಶನ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಇನ್ನೂ ಹಲವು ಧಾರ್ಮಿಕ, ಸಾಮಾಜಿಕ ಉಲಮಾ ಉಮರ ನಾಯಕರು ಆಗಮಿಸಲಿದ್ದಾರೆ ಎಂದು ಮೀಲಾದ್ ಸಮಾವೇಶ ಸ್ವಾಗತ ಸಮಿತಿ ಜನರಲ್ ಕನ್ವೀನರ್ ಅಬ್ದುಲ್ ಹಕೀಮ್ ತುರ್ಕಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…