Advertisement
ಕಾರ್ಯಕ್ರಮಗಳು

ನ. 16 ರಂದು ಪಂಜದಲ್ಲಿ ಜಾಕೆ ಮಾಧವ ಗೌಡ ಸಪ್ತತಿ ಸಂಭ್ರಮ

Share

ಸುಬ್ರಹ್ಮಣ್ಯ: ನಾಡಿನ ಹಿರಿಯ ಸಹಕಾರಿ, ಸಾಮಾಜಿಕ ಧುರೀಣ ಜಾಕೆ ಮಾಧವ ಗೌಡರಿಗೆ 7೦ ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಸನ್ಮಾನಿಸುವ ಜಾಕೆ ಸಪ್ತತಿ ಕಾರ್ಯಕ್ರಮವು ನ. 16 ರಂದು ಅವರ ಅಭಿಮಾನಿಗಳು ಮತ್ತು ಹಿತೈಷಿಗಳ ವತಿಯಿಂದ ಪಂಜದಲ್ಲಿ ನಡೆಯಲಿದೆ. ಅಭಿನಂದನಾ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ನ. 16ರಂದು ಸಂಜೆ 4 ಗಂಟೆಗೆ ಪಂಜ ಸಹಕಾರಿ ಸಂಘದ ಬಳಿಯಿಂದ ಮೆರವಣಿಗೆ ನಡೆಯಲಿದ್ದು, ಪಂಜ ಗ್ರಾ.ಪಂ. ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ ಮೆರವಣಿಗೆಯನ್ನು ಉದ್ಘಾಟಿಸಲಿದ್ದಾರೆ. ಸಂಜೆ 5.40ಕ್ಕೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸ್ಥಾಪಕಾಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸಮಾರಂಭ ಉದ್ಘಾಟಿಸಲಿದ್ದಾರೆ. ಜಾಕೆ ಮಾಧವ ಗೌಡರನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸನ್ಮಾನಿಸಲಿದ್ದು, ನವದೆಹಲಿ ಜವಾಹರಲಾಲ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಬಿಳಿಮಲೆ ಅಭಿನಂದನಾ ಭಾಷಣ ಮಾಡಲಿದ್ದಾರೆ.

ಜಾಕೆಯವರ ಕುರಿತು ನಿರ್ಮಿಸಲಾದ ಸಾಕ್ಷ್ಯಚಿತ್ರವನ್ನು ಶಾಸಕ ಎಸ್.ಅಂಗಾರ ಚಿಡುಗಡೆ ಮಾಡಲಿದ್ದು, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮುಖ್ಯಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಜಾಕೆ ಮಾಧವ ಗೌಡರು ಹಿರಿಯ ಮುತ್ಸದ್ಧಿಯಾಗಿ ರಾಜಕೀಯ, ಸಾಮಾಜಿಕ, ಸಹಕಾರ, ಸಾಹಿತ್ಯ ಸಂಘಟನೆ ಸೇರಿದಂತೆ ಸಮಾಜಕ್ಕೆ ನಾನಾ ರೀತಿಯಲ್ಲಿ, ನಾನಾ ಕ್ಷೇತ್ರಗಳಲ್ಲಿ ಕೊಡುಗೆ ನೀಡಿ ಮಾದರಿಯಾಗಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾಗಿ, ಸುಳ್ಯ ಎಪಿಎಂಸಿ ಅಧ್ಯಕ್ಷರಾಗಿ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ, ಆಳ್ವಾಸ್ ನುಡಿಸಿರಿ ಘಟಕದ ಅಧ್ಯಕ್ಷರಾಗಿ, ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಕಲ್ಮಡ್ಕ ಹಾಗೂ ಪಂಬೆತ್ತಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದಾರೆ. ಅವರು ನಾಡಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರನ್ನು ಅಭಿನಂದಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು.

ಸಭಾ ಕಾರ್ಯಕ್ರಮದ ಬಳಿಕ ಮಂಗಳೂರಿನ ಹೆಜ್ಜೆನಾದ ತಂಡದಿಂದ ಜ್ಞಾನ ಐತಾಳ್ ನಿರ್ದೇಶನದಲ್ಲಿ ನೃತ್ಯ ವೈಭವ ನಡೆಯಲಿದೆ. ಬಳಿಕ ಸಹಭೋಜನ ನಡೆಯಲಿದೆ.
ಈ ಸ್ಮರಣೀಯ ಕಾರ್ಯಕ್ರಮದಲ್ಲಿ ಜಾಕೆ ಮಾಧವ ಗೌಡರ ಅಭಿಮಾನಿಗಳು ಹಾಗೂ ಹಿತೈಷಿಗಳು ಭಾಗವಹಿಸಬೇಕೆಂದು ಅವರು ವಿನಂತಿಸಿದರು. ಅಭಿನಂದನಾ ಸಮಿತಿ ಪ್ರಧಾನ ಕಾರ್ಯದರ್ಶಿ ಶಶಿಧರ ಪಳಂಗಾಯ, ಕೋಶಾಧಿಕಾರಿ ಸುರೇಶ್‌ಕುಮಾರ್ ನಡ್ಕ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

6 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

1 day ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

2 days ago