ಸುದ್ದಿಗಳು

ನ.17ಪಂಜ ಜೇಸಿ ಸಪ್ತಾಹ-2019 ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಜೇಸಿಐ ಪಂಜ ಪಂಚಶ್ರೀ ಇದರ ಜೇಸಿ ಸಪ್ತಾಹ-2019 ಕಾರ್ಯಕ್ರಮವು ನ.1 ರಿಂದ 23ರ ತನಕ  ನಡೆಯಲಿದೆ ಎಂದು ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಸುದೇವ ಮೇಲ್ಪಾಡಿ ತಿಳಿಸಿದ್ದಾರೆ.

Advertisement
Advertisement

ಸುಬ್ರಹ್ಮಣ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ.17ರಂದು ಸಪ್ತಾಹದ ಉದ್ಘಾಟನೆಗೊಳ್ಳಲಿದೆ. ಅದೇ ದಿನ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಬದಿಯ ಕೃಷಿಕ ಶ್ರೇಯಾಂಸ್‍ಕುಮಾರ್ ಶೆಟ್ಟಿಮೂಲೆರವರ ಭತ್ತದ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಪ್ರಾಂತ್ಯ ಇ ವಲಯ ಉಪಾಧ್ಯಕ್ಷ ಜಯೇಶ್ ಬರೆಟ್ಟೋ ಕಾರ್ಯಕ್ರಮ ಉದ್ಘಾಟಿಸುವರು. ದ.ಕ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಶಿವರಾಮ ಯೇನೆಕಲ್ಲು, ಸ್ಥಳದಾನಿ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ ಮುಖ್ಯ ಅತಿಥಿಯಾಗಿರುವರು.
ಸಂಜೆ ನಡೆಯುವ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮರ್ಧಾಳ ಸೈಂಟ್ ಮೇರಿಸ್ ಪ್ರೌಡಶಾಲಾ ಅಧ್ಯಾಪಕ ಸುಬ್ರಹ್ಮಣ್ಯ ಗೌಡ ಕೆ.ಜಿ, ಬಹುಮಾನ ವಿತರಣೆಯನ್ನು ಜೇಸಿಐ ವಲಯ ಪೂರ್ವ ವಲಯಾಧಿಕಾರಿ ಗಣೇಶ್ ಕೈಕುರೆ, ದತ್ತುನಿಧಿಯನ್ನು ಪಂಜ ಲಯನ್ಸ್ ಕ್ಲಬ್ ಸುರೇಶ್ ಕುಮಾರ್ ವಿತರಿಸುವರು. ಶಿವಾಜಿ ಯುವಕ ಮಂಡಲ ಅಧ್ಯಕ್ಷ ಆಶಿತ್ ಕಲ್ಲಾಜೆ ಉಪಸ್ಥಿತರಿರುವರು ಎಂದರು.

ನ.18ರಂದು ಸ.ಪಪೂ ಕಾಲೇಜು ಪಂಜ ಇಲ್ಲಿ ಹಾವು ಮತ್ತು ನಾವು ಪ್ರಾತ್ಯಕ್ಷಿತೆ ಮತ್ತು ಮಾಹಿತಿ ಕಾರ್ಯಕ್ರಮ, ನ.19ರಂದು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಸಂಸ್ಥೆಯಲ್ಲಿ ಪದವಿ ಕಾಲೇಜುಗಳ ಆಯ್ದ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಗಾರ. ನ.20ರಂದು ಕೆ. ಎಸ್ ಗೌಡ ಸಮೂಹ ವಿದ್ಯಾಸಂಸ್ಥೆ ನಿಂತಿಕಲ್ಲು ಇಲ್ಲಿ ಆರೋಗ್ಯಭಾಗ್ಯ ಮಾಹಿತಿ ಕಾರ್ಯಗಾರ ನಡೆಯಲಿದೆ. ನ.21ರಂದು ಹಾಲೆಮಜಲು ವೆಂಕಟೇಶ್ವರ ಸಭಾಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಆದರ್ಶ ಯೂತ್ ಕ್ಲಬ್ ಹಾಲೆಮಜಲು ಸಹಕಾರದಲ್ಲಿ ಗುಟ್ಟು ಗೊತ್ತಾಂಡ್ ತುಳು ಹಾಸ್ಯ ನಾಟಕ ನಡೆಯಲಿದೆ.

ನ.23ರಂದು ಸಮಾರೋಪ ಸಮಾರಂಭ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಅಂದು ಜೇಸಿಐ ಪೂರ್ವಾಧ್ಯಕ್ಷ ಪುರುಷೋತ್ತಮ ದಂಬೆಕೋಡಿ ಅವರಿಗೆ ಕಮಲಪತ್ರ ಪುರಸ್ಕಾರ ನೀಡಲಾಗುವುದು. ಜೇಸಿಐ ವಲಯ ಪೂರ್ವಾಧ್ಯಕ್ಷ ಚಂದ್ರಹಾಸ ರೈ ಪುರಸ್ಕರಿಸುವರು. ಜಿ.ಪಂ ಮಾಜಿ ಸದಸ್ಯ ಭರತ್ ಮುಂಡೋಡಿ ಅವರು ಹಿರಿಯ ಯಕ್ಷಗಾನ ಕಲಾವಿದ ದಿನೇಶ್ ಅಮ್ಮಣ್ಣಾಯ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ  ಉಮಾಕುಮಾರಿ, ಭಜನಾ ಪರಿಷತ್ ಅಧ್ಯಕ್ಷ ಬಾಲಕೃಷ್ಣ ಪುತ್ಯ ಇವರುಗಳನ್ನು ಸನ್ಮಾನಿಸುವರು. ಇದೇ ವೇಳೆ ಅಂತರಾಷ್ಟ್ರೀಯ ಚಿತ್ರಕಲಾ ಪ್ರಶಸ್ತಿ ವಿಜೇತ ವಿಕಾಸ್ ಗೌಡ, ಎಸ್‍ಎಸ್‍ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನಿ ಕೃಪಾ ಕೆ.ಆರ್, ಅಂತರಾಷ್ಟ್ರೀಯ ಸರ್ಫಿಂಗ್ ಪಟು ಸಿಂಷನಾ ಡಿ ಗೌಡ ಇವರುಗಳನ್ನು ಪುರಸ್ಕರಿಸಲಾಗುತ್ತದೆ ಎಂದರು, ಅಂದು ರಾತ್ರಿ ಯಕ್ಷಗಾನ ವೈಭವ ಮತ್ತು ನಮ್ಮ ಕಲಾವಿದೆರ್ ಬೆದ್ರ ಇವರಿಂದ ಪಾಂಡುನ ಅಲಕ್ಕ ಪೋಂಡು ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ದೇವಿಪ್ರಸಾದ್ ಚಿಕ್ಮುಳಿ, ನಾಗಮಣಿ ಕೆದಿಲ, ಚಿದಾನಂದ ಕುಳ ಉಪಸ್ಥಿತರಿದ್ದರು.

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿರಂತರ ಮಳೆಯಿಂದಾಗಿ ತರಕಾರಿಗಳ ಬೆಲೆ ನಗರದಲ್ಲಿ ಏನಾಗಿದೆ..?

ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…

5 hours ago

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

6 hours ago

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

11 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

14 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

14 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

14 hours ago