ನವದೆಹಲಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಅರವಿಂದ್ ಬೊಬ್ಡೆ ನೇಮಕವಾಗಿದ್ದು, ನವೆಂಬರ್ 18 ರಂದು ಮುಖ್ಯ ನ್ಯಾಯಮೂರ್ತಿಯಾಗಿ ಬೊಬ್ಡೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಸ್ಟೀಸ್ ರಂಜನ್ ಗೊಗಾಯ್ ಅವರು ಜಸ್ಟೀಸ್ ಅರವಿಂದ್ ಬೊಬ್ಡೆ ಅವರ ಹೆಸರನ್ನು ಉನ್ನತ ಹುದ್ದೆಗೆ ಶಿಫಾರಸು ಮಾಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ.
ನ.17ರಂದು ಹಾಲಿ ಸಿಜೆಐ ರಂಜನ್ ಗೊಗಾಯ್ ನಿವೃತ್ತರಾಗುತ್ತಿದ್ದಾರೆ. ನ್ಯಾಯಮೂರ್ತಿ ಬೊಬ್ಡೆ 47 ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಮಧ್ಯಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿದ್ದ ಜಸ್ಟೀಸ್ ಬೊಬ್ಡೆ ಅವರು 2021 ಏ.23ರಂದು ನಿವೃತ್ತಿಯಾಗಲಿರುವರು.
ಶರದ್ ಅರವಿಂದ್ ಬೊಬ್ಡೆ: ಮಹಾರಾಷ್ಟ್ರದ ನಾಗ್ಪುರದಲ್ಲಿ ಏ.24, 1956ರಂದು ಜನಿಸಿದ ಬೊಬ್ಡೆ ಅವರು ನಾಗ್ಪುರ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವರು. ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದಾರೆ. 2000ರ ಮಾ. 29ರಂದು ಬಾಂಬೆ ಹೈಕೋರ್ಟಿನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡರು. 2012ರಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರಾದರು. 2013ರ ಏಪ್ರಿಲ್ ರಲ್ಲಿ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದಿದ್ದಾರೆ.
ಅಯೋಧ್ಯಾ ಪ್ರಕರಣ, ಬಿಸಿಸಿಐ ಕೇಸ್, ಪಟಾಕಿ ನಿಷೇಧ ಪ್ರಕರಣ ಮುಂತಾದ ಪ್ರಕರಣಗಳನ್ನು ಬೊಬ್ಡೆ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…