Advertisement
ರಾಷ್ಟ್ರೀಯ

ನ.18ರಂದು ನೂತನ ಸಿಜೆಐಯಾಗಿ ಅರವಿಂದ್ ಶರದ್ ಬೊಬ್ಡೆ ಪ್ರಮಾಣ ವಚನ

Share

ನವದೆಹಲಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಅರವಿಂದ್ ಬೊಬ್ಡೆ ನೇಮಕವಾಗಿದ್ದು, ನವೆಂಬರ್ 18 ರಂದು ಮುಖ್ಯ ನ್ಯಾಯಮೂರ್ತಿಯಾಗಿ ಬೊಬ್ಡೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಸ್ಟೀಸ್ ರಂಜನ್ ಗೊಗಾಯ್ ಅವರು ಜಸ್ಟೀಸ್ ಅರವಿಂದ್ ಬೊಬ್ಡೆ ಅವರ ಹೆಸರನ್ನು ಉನ್ನತ ಹುದ್ದೆಗೆ ಶಿಫಾರಸು ಮಾಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ.

ನ.17ರಂದು ಹಾಲಿ ಸಿಜೆಐ ರಂಜನ್ ಗೊಗಾಯ್ ನಿವೃತ್ತರಾಗುತ್ತಿದ್ದಾರೆ. ನ್ಯಾಯಮೂರ್ತಿ ಬೊಬ್ಡೆ 47 ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಮಧ್ಯಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿದ್ದ ಜಸ್ಟೀಸ್ ಬೊಬ್ಡೆ ಅವರು 2021 ಏ.23ರಂದು ನಿವೃತ್ತಿಯಾಗಲಿರುವರು.

ಶರದ್ ಅರವಿಂದ್ ಬೊಬ್ಡೆ: ಮಹಾರಾಷ್ಟ್ರದ ನಾಗ್ಪುರದಲ್ಲಿ ಏ.24, 1956ರಂದು ಜನಿಸಿದ ಬೊಬ್ಡೆ ಅವರು ನಾಗ್ಪುರ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವರು. ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದಾರೆ. 2000ರ ಮಾ. 29ರಂದು ಬಾಂಬೆ ಹೈಕೋರ್ಟಿನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡರು. 2012ರಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರಾದರು. 2013ರ ಏಪ್ರಿಲ್ ರಲ್ಲಿ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದಿದ್ದಾರೆ.

ಅಯೋಧ್ಯಾ ಪ್ರಕರಣ, ಬಿಸಿಸಿಐ ಕೇಸ್, ಪಟಾಕಿ ನಿಷೇಧ ಪ್ರಕರಣ ಮುಂತಾದ ಪ್ರಕರಣಗಳನ್ನು ಬೊಬ್ಡೆ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

3 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

3 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

4 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

19 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

19 hours ago