ಮಂಗಳೂರು: ಪ್ರಸಾರ ಭಾರತಿ ಮಾಜಿ ಅಧ್ಯಕ್ಷೆ, ಹಿಂದೂಸ್ತಾನ್ ಪತ್ರಿಕೆಯ ಸಂಪಾದಕಿಯಾಗಿದ್ದ ಮೃಣಾಲ್ ಪಾಂಡೆ ಅವರ ಕುರಿತಾದ ಎರಡು ಕೃತಿಗಳ ಬಿಡುಗಡೆ ಸಮಾರಂಭ ನ.18ರಂದು ಸಂಜೆ 4ಕ್ಕೆ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಹಿಂದಿ ಶಿಕ್ಷಕಿ ಡಾ.ಯಶೋಧಾ ಕರನಿಂಗ ಅವರು ಬರೆದಿರುವ ಕೃತಿಗಳನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಬಿಡುಗಡೆ ಮಾಡಿ, ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ (ಎನ್ ಎಸ್ ಸಿಡಿಎಫ್) ವತಿಯಿಂದ ನಡೆಯುವ ಮೂರು ದಿನಗಳ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
“ಮೃಣಾಲ್ ಪಾಂಡೆ ಕೇ ಕಥಾ ಮೇ ನಾರಿ ಚೇತನ” ಮತ್ತು ಅವರ ದೇವಿ ಕಾದಂಬರಿಯ ವಿಮರ್ಶಾ ಕೃತಿ “ಮೃಣಾಲ್ ಪಾಂಡೆ ಉಪನ್ಯಾಸ್ ಕ ನಯಾ ಸಂದರ್ಭ್” ಎಂಬ ಎರಡು ಹಿಂದಿ ಕೃತಿಗಳು ಈ ಸಂದರ್ಭದಲ್ಲಿ ಬಿಡುಗಡೆ ಆಗಲಿವೆ. ಪ್ರಸಾರ ಭಾರತಿಯ ಅಧ್ಯಕ್ಷೆಯಾಗಿದ್ದ ಮೃಣಾಲ್ ಪಾಂಡೆ ಅವರು ಕಳೆದ ಶತಮಾನದ ಮಹಿಳಾ ಪತ್ರಕರ್ತರಲ್ಲಿ ಪ್ರಮುಖರಾಗಿದ್ದಾರೆ.
ಕೃತಿಗಳ ಲೇಖಕಿ ಉಡುಪಿ ಮರವಂತೆ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿದ್ದು, ಇದೀಗ ಶಿರಸಿಯ ಸರಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೇ ಸಂದರ್ಭದಲ್ಲಿ ಪತ್ರಕರ್ತ ಎಂ.ಎಂ.ಎ. ಶರೀಫ್ ಹಾಗೂ ರಂಗ ಕಲಾವಿದ ಇಂದುಶೇಖರ್ ಅವರನ್ನು ಸನ್ಮಾನಿಸಲಾಗುವುದು. ಪ್ರತಿಷ್ಠಾನದ ಅಧ್ಯಕ್ಷ ಗಂಗಾಧರ ಗಾಂಧಿ ಅಧ್ಯಕ್ಷತೆ ವಹಿಸಲಿದ್ದು, ನ್ಯಾಯವಾದಿ ಗಂಗಾಧರ ಉಳ್ಳಾಲ, ಲೇಖಕಿ ಯಶೋಧ ಕರನಿಂದ, ಸಾಮಾಜಿಕ ಕಾರ್ಯಕರ್ತೆ ಭಾರೀರತಿ ಬಿ.ಕೆ. ಕೊಡಗು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ದಿನಕರ ಡಿ.ಬಂಗೇರ, ಮಲ್ಲಿಕಾ ಅಜಿತ್ ಶೆಟ್ಟಿ ಭಾಗವಹಿಸುವರು.
ನ.18ರಿಂದ 20ರ ತನಕ ಪ್ರತಿ ದಿನ ಸಂಜೆ ಪುರಭವನದಲ್ಲಿ ಸಂಸ್ಕೃತಿ ಸಂಭ್ರಮ ಅಂಗವಾಗಿ ಯಕ್ಷಗಾನ, ಜಾನಪದ ನೃತ್ಯ ಸಹಿತ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…