Advertisement
ಸುದ್ದಿಗಳು

ನ.18ರಂದು ಪ್ರಸಾರ ಭಾರತಿ ಮಾಜಿ ಅಧ್ಯಕ್ಷೆ ಮೃಣಾಲ್ ಪಾಂಡೆ ಕುರಿತ ಎರಡು ಕೃತಿಗಳ ಬಿಡುಗಡೆ

Share

ಮಂಗಳೂರು: ಪ್ರಸಾರ ಭಾರತಿ ಮಾಜಿ ಅಧ್ಯಕ್ಷೆ, ಹಿಂದೂಸ್ತಾನ್ ಪತ್ರಿಕೆಯ ಸಂಪಾದಕಿಯಾಗಿದ್ದ ಮೃಣಾಲ್ ಪಾಂಡೆ ಅವರ ಕುರಿತಾದ ಎರಡು ಕೃತಿಗಳ ಬಿಡುಗಡೆ ಸಮಾರಂಭ ನ.18ರಂದು ಸಂಜೆ 4ಕ್ಕೆ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.

ಹಿಂದಿ ಶಿಕ್ಷಕಿ ಡಾ.ಯಶೋಧಾ ಕರನಿಂಗ ಅವರು ಬರೆದಿರುವ ಕೃತಿಗಳನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಬಿಡುಗಡೆ ಮಾಡಿ, ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ (ಎನ್ ಎಸ್ ಸಿಡಿಎಫ್) ವತಿಯಿಂದ ನಡೆಯುವ ಮೂರು ದಿನಗಳ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

“ಮೃಣಾಲ್ ಪಾಂಡೆ ಕೇ ಕಥಾ ಮೇ ನಾರಿ ಚೇತನ” ಮತ್ತು ಅವರ ದೇವಿ ಕಾದಂಬರಿಯ ವಿಮರ್ಶಾ ಕೃತಿ “ಮೃಣಾಲ್ ಪಾಂಡೆ ಉಪನ್ಯಾಸ್ ಕ ನಯಾ ಸಂದರ್ಭ್” ಎಂಬ ಎರಡು ಹಿಂದಿ ಕೃತಿಗಳು ಈ ಸಂದರ್ಭದಲ್ಲಿ ಬಿಡುಗಡೆ ಆಗಲಿವೆ. ಪ್ರಸಾರ ಭಾರತಿಯ ಅಧ್ಯಕ್ಷೆಯಾಗಿದ್ದ ಮೃಣಾಲ್ ಪಾಂಡೆ ಅವರು ಕಳೆದ ಶತಮಾನದ ಮಹಿಳಾ ಪತ್ರಕರ್ತರಲ್ಲಿ ಪ್ರಮುಖರಾಗಿದ್ದಾರೆ.

ಕೃತಿಗಳ ಲೇಖಕಿ ಉಡುಪಿ ಮರವಂತೆ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿದ್ದು, ಇದೀಗ ಶಿರಸಿಯ ಸರಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಪತ್ರಕರ್ತ ಎಂ.ಎಂ.ಎ. ಶರೀಫ್ ಹಾಗೂ ರಂಗ ಕಲಾವಿದ ಇಂದುಶೇಖರ್ ಅವರನ್ನು ಸನ್ಮಾನಿಸಲಾಗುವುದು. ಪ್ರತಿಷ್ಠಾನದ ಅಧ್ಯಕ್ಷ ಗಂಗಾಧರ ಗಾಂಧಿ ಅಧ್ಯಕ್ಷತೆ ವಹಿಸಲಿದ್ದು, ನ್ಯಾಯವಾದಿ ಗಂಗಾಧರ ಉಳ್ಳಾಲ, ಲೇಖಕಿ ಯಶೋಧ ಕರನಿಂದ, ಸಾಮಾಜಿಕ ಕಾರ್ಯಕರ್ತೆ ಭಾರೀರತಿ ಬಿ.ಕೆ. ಕೊಡಗು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ದಿನಕರ ಡಿ.ಬಂಗೇರ, ಮಲ್ಲಿಕಾ ಅಜಿತ್ ಶೆಟ್ಟಿ ಭಾಗವಹಿಸುವರು.

ನ.18ರಿಂದ 20ರ ತನಕ ಪ್ರತಿ ದಿನ ಸಂಜೆ ಪುರಭವನದಲ್ಲಿ ಸಂಸ್ಕೃತಿ ಸಂಭ್ರಮ ಅಂಗವಾಗಿ ಯಕ್ಷಗಾನ, ಜಾನಪದ ನೃತ್ಯ ಸಹಿತ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

4 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

5 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago