Advertisement
ಸುದ್ದಿಗಳು

ನ.18ರಂದು ಪ್ರಸಾರ ಭಾರತಿ ಮಾಜಿ ಅಧ್ಯಕ್ಷೆ ಮೃಣಾಲ್ ಪಾಂಡೆ ಕುರಿತ ಎರಡು ಕೃತಿಗಳ ಬಿಡುಗಡೆ

Share

ಮಂಗಳೂರು: ಪ್ರಸಾರ ಭಾರತಿ ಮಾಜಿ ಅಧ್ಯಕ್ಷೆ, ಹಿಂದೂಸ್ತಾನ್ ಪತ್ರಿಕೆಯ ಸಂಪಾದಕಿಯಾಗಿದ್ದ ಮೃಣಾಲ್ ಪಾಂಡೆ ಅವರ ಕುರಿತಾದ ಎರಡು ಕೃತಿಗಳ ಬಿಡುಗಡೆ ಸಮಾರಂಭ ನ.18ರಂದು ಸಂಜೆ 4ಕ್ಕೆ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.

ಹಿಂದಿ ಶಿಕ್ಷಕಿ ಡಾ.ಯಶೋಧಾ ಕರನಿಂಗ ಅವರು ಬರೆದಿರುವ ಕೃತಿಗಳನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಬಿಡುಗಡೆ ಮಾಡಿ, ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ (ಎನ್ ಎಸ್ ಸಿಡಿಎಫ್) ವತಿಯಿಂದ ನಡೆಯುವ ಮೂರು ದಿನಗಳ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

“ಮೃಣಾಲ್ ಪಾಂಡೆ ಕೇ ಕಥಾ ಮೇ ನಾರಿ ಚೇತನ” ಮತ್ತು ಅವರ ದೇವಿ ಕಾದಂಬರಿಯ ವಿಮರ್ಶಾ ಕೃತಿ “ಮೃಣಾಲ್ ಪಾಂಡೆ ಉಪನ್ಯಾಸ್ ಕ ನಯಾ ಸಂದರ್ಭ್” ಎಂಬ ಎರಡು ಹಿಂದಿ ಕೃತಿಗಳು ಈ ಸಂದರ್ಭದಲ್ಲಿ ಬಿಡುಗಡೆ ಆಗಲಿವೆ. ಪ್ರಸಾರ ಭಾರತಿಯ ಅಧ್ಯಕ್ಷೆಯಾಗಿದ್ದ ಮೃಣಾಲ್ ಪಾಂಡೆ ಅವರು ಕಳೆದ ಶತಮಾನದ ಮಹಿಳಾ ಪತ್ರಕರ್ತರಲ್ಲಿ ಪ್ರಮುಖರಾಗಿದ್ದಾರೆ.

ಕೃತಿಗಳ ಲೇಖಕಿ ಉಡುಪಿ ಮರವಂತೆ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿದ್ದು, ಇದೀಗ ಶಿರಸಿಯ ಸರಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಪತ್ರಕರ್ತ ಎಂ.ಎಂ.ಎ. ಶರೀಫ್ ಹಾಗೂ ರಂಗ ಕಲಾವಿದ ಇಂದುಶೇಖರ್ ಅವರನ್ನು ಸನ್ಮಾನಿಸಲಾಗುವುದು. ಪ್ರತಿಷ್ಠಾನದ ಅಧ್ಯಕ್ಷ ಗಂಗಾಧರ ಗಾಂಧಿ ಅಧ್ಯಕ್ಷತೆ ವಹಿಸಲಿದ್ದು, ನ್ಯಾಯವಾದಿ ಗಂಗಾಧರ ಉಳ್ಳಾಲ, ಲೇಖಕಿ ಯಶೋಧ ಕರನಿಂದ, ಸಾಮಾಜಿಕ ಕಾರ್ಯಕರ್ತೆ ಭಾರೀರತಿ ಬಿ.ಕೆ. ಕೊಡಗು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ದಿನಕರ ಡಿ.ಬಂಗೇರ, ಮಲ್ಲಿಕಾ ಅಜಿತ್ ಶೆಟ್ಟಿ ಭಾಗವಹಿಸುವರು.

ನ.18ರಿಂದ 20ರ ತನಕ ಪ್ರತಿ ದಿನ ಸಂಜೆ ಪುರಭವನದಲ್ಲಿ ಸಂಸ್ಕೃತಿ ಸಂಭ್ರಮ ಅಂಗವಾಗಿ ಯಕ್ಷಗಾನ, ಜಾನಪದ ನೃತ್ಯ ಸಹಿತ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

7 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

7 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

20 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

21 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

21 hours ago