ಮಂಗಳೂರು: ಪ್ರಸಾರ ಭಾರತಿ ಮಾಜಿ ಅಧ್ಯಕ್ಷೆ, ಹಿಂದೂಸ್ತಾನ್ ಪತ್ರಿಕೆಯ ಸಂಪಾದಕಿಯಾಗಿದ್ದ ಮೃಣಾಲ್ ಪಾಂಡೆ ಅವರ ಕುರಿತಾದ ಎರಡು ಕೃತಿಗಳ ಬಿಡುಗಡೆ ಸಮಾರಂಭ ನ.18ರಂದು ಸಂಜೆ 4ಕ್ಕೆ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಹಿಂದಿ ಶಿಕ್ಷಕಿ ಡಾ.ಯಶೋಧಾ ಕರನಿಂಗ ಅವರು ಬರೆದಿರುವ ಕೃತಿಗಳನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಬಿಡುಗಡೆ ಮಾಡಿ, ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ (ಎನ್ ಎಸ್ ಸಿಡಿಎಫ್) ವತಿಯಿಂದ ನಡೆಯುವ ಮೂರು ದಿನಗಳ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
“ಮೃಣಾಲ್ ಪಾಂಡೆ ಕೇ ಕಥಾ ಮೇ ನಾರಿ ಚೇತನ” ಮತ್ತು ಅವರ ದೇವಿ ಕಾದಂಬರಿಯ ವಿಮರ್ಶಾ ಕೃತಿ “ಮೃಣಾಲ್ ಪಾಂಡೆ ಉಪನ್ಯಾಸ್ ಕ ನಯಾ ಸಂದರ್ಭ್” ಎಂಬ ಎರಡು ಹಿಂದಿ ಕೃತಿಗಳು ಈ ಸಂದರ್ಭದಲ್ಲಿ ಬಿಡುಗಡೆ ಆಗಲಿವೆ. ಪ್ರಸಾರ ಭಾರತಿಯ ಅಧ್ಯಕ್ಷೆಯಾಗಿದ್ದ ಮೃಣಾಲ್ ಪಾಂಡೆ ಅವರು ಕಳೆದ ಶತಮಾನದ ಮಹಿಳಾ ಪತ್ರಕರ್ತರಲ್ಲಿ ಪ್ರಮುಖರಾಗಿದ್ದಾರೆ.
ಕೃತಿಗಳ ಲೇಖಕಿ ಉಡುಪಿ ಮರವಂತೆ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿದ್ದು, ಇದೀಗ ಶಿರಸಿಯ ಸರಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೇ ಸಂದರ್ಭದಲ್ಲಿ ಪತ್ರಕರ್ತ ಎಂ.ಎಂ.ಎ. ಶರೀಫ್ ಹಾಗೂ ರಂಗ ಕಲಾವಿದ ಇಂದುಶೇಖರ್ ಅವರನ್ನು ಸನ್ಮಾನಿಸಲಾಗುವುದು. ಪ್ರತಿಷ್ಠಾನದ ಅಧ್ಯಕ್ಷ ಗಂಗಾಧರ ಗಾಂಧಿ ಅಧ್ಯಕ್ಷತೆ ವಹಿಸಲಿದ್ದು, ನ್ಯಾಯವಾದಿ ಗಂಗಾಧರ ಉಳ್ಳಾಲ, ಲೇಖಕಿ ಯಶೋಧ ಕರನಿಂದ, ಸಾಮಾಜಿಕ ಕಾರ್ಯಕರ್ತೆ ಭಾರೀರತಿ ಬಿ.ಕೆ. ಕೊಡಗು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ದಿನಕರ ಡಿ.ಬಂಗೇರ, ಮಲ್ಲಿಕಾ ಅಜಿತ್ ಶೆಟ್ಟಿ ಭಾಗವಹಿಸುವರು.
ನ.18ರಿಂದ 20ರ ತನಕ ಪ್ರತಿ ದಿನ ಸಂಜೆ ಪುರಭವನದಲ್ಲಿ ಸಂಸ್ಕೃತಿ ಸಂಭ್ರಮ ಅಂಗವಾಗಿ ಯಕ್ಷಗಾನ, ಜಾನಪದ ನೃತ್ಯ ಸಹಿತ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…