Advertisement
ಸುದ್ದಿಗಳು

ನ.30-ಪುತ್ತೂರಿನಲ್ಲಿ ಕೃಷಿ ಪೂರಕ ಆವಿಷ್ಕಾರಗಳ ಪ್ರದರ್ಶನ : ಕೃಷಿಕರ ಸಭೆ

Share

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಹಾಗೂ  ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿ ಆಶ್ರಯದಲ್ಲಿ ಲಘು ಉದ್ಯೋಗ ಭಾರತಿ ಇದರ ಸಹಯೋಗದೊಂದಿಗೆ ನ.30 ಹಾಗು ಡಿ.1 ರಂದು ಕೃಷಿ ಪೂರಕ ಆವಿಷ್ಕಾರಗಳ  ಪ್ರದರ್ಶನ ಅನ್ವೇಷಣಾ-2019 ರಾಜ್ಯಮಟ್ಟದ ಕಾರ್ಯಕ್ರಮ  ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ  ನಡೆಯಲಿದೆ. ಈ ಹಿನ್ನೆಲೆಯಲ್ಲಿ  ಶುಕ್ರವಾರ ಕೃಷಿಕರ ಸಭೆ ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ  ನಡೆಯಿತು.

Advertisement
Advertisement

ಅನ್ವೇಷಣಾ-2019 ರಾಜ್ಯಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್ ನಲ್ಲಿ  ಕೃಷಿಕರ ಆವಿಷ್ಕಾರಗಳು ಹಾಗೂ ವಿದ್ಯಾರ್ಥಿಗಳ ಸಂಶೋಧನೆಗಳು ಪ್ರದರ್ಶನಗೊಳ್ಳಲಿದೆ. ಇದರ ಜೊತೆಗೆ ಕಾರ್ಯಕ್ರಮಕ್ಕೆ ಲಘು ಉದ್ಯೋಗ ಭಾರತಿಯೂ ಭಾಗವಹಿಸುವರಿಂದ ಮುಂದಿನ ದಿನಗಳಲ್ಲಿ  ಕೃಷಿಕ ಆವಿಷ್ಕಾರಗಳನ್ನು ಕೃಷಿಕರು ಆಸಕ್ತಿ ಹೊಂದಿದ್ದರೆ ಅಭಿವೃದ್ಧಿಪಡಿಸಿ  ಕೃಷಿಕರ ಹೆಸರಿನಲ್ಲಿಯೇ ಮಾರುಕಟ್ಟೆಗೆ ಬಿಡುವ ಮೂಲಕ ಕೃಷಿ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಠಿ ಮಾಡುವ ಉದ್ದೇಶ ಹೊಂದಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಕೃಷಿ ಸಂಶೋಧನೆಗಳ ಕಡೆಗೆ ಆಸಕ್ತಿ ಹುಟ್ಟಿಸುವುದು  ಈ ಮೇಳದ ಪ್ರಮುಖ ಉದ್ದೇಶವಾಗಿದೆ. ಈಗಾಗಲೇ ಸುಮಾರು 350 ಕೃಷಿ ಅನ್ವೇಷಣೆಗಳನ್ನು ಗುರುತಿಸಲಾಗಿದೆ. ಆಸಕ್ತ ಕೃಷಿಕರು ತಮ್ಮ ಸಂಶೋಧನೆಗಳನ್ನು  ಪ್ರದರ್ಶನ ಮಾಡಲು ಅವಕಾಶ ಇದೆ ಎಂದು ಸಭೆಯಲ್ಲಿ  ಮಾಹಿತಿ ನೀಡಲಾಯಿತು. ಪ್ರಮುಖವಾಗಿ ಕೃಷಿಕರು ಈ ಕಾರ್ಯಕ್ರಮಕ್ಕೆ ಆಗಮಿಸಿ ಕೃಷಿ ಸಂಶೋಧನೆಗಳನ್ನು  ಪ್ರೋತ್ಸಾಹಿಸುವುದು ಹಾಗೂ ಅಭಿವೃದ್ಧಿಗೆ ಸಲಹೆ ನೀಡಬೇಕಾಗಿದೆ, ಈ ಕಾರಣದಿಂದ ಹೆಚ್ಚಿನ ಕೃಷಿಕರು ಕಾರ್ಯಕ್ರಮಕ್ಕೆ ಬರುವಂತೆ ಮಾಹಿತಿ ನೀಡಬೇಕು ಎಂದು ಸಭೆಯಲ್ಲಿ  ತಿಳಿಸಲಾಯಿತು.

ಸಭೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಇ.ಶಿವಪ್ರಸಾದ್ ,  ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ  ಶಿವಪ್ರಕಾಶ್ ಎಂ, ಸಂಚಾಲಕರಾದ  ಮುರಳೀಧರ ಕೆ, ಸದಸ್ಯರಾದ  ಭರತ್ ಪೈ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಆರ್ ಸಿ ನಾರಾಯಣ ರೆಂಜ , ಅಡಿಕೆ ಪತ್ರಿಕೆಯ ಸಂಪಾದಕರಾದ ನಾ. ಕಾರಂತ ಪೆರಾಜೆ ಮೊದಲಾದವರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

8 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

8 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago