Advertisement
ಸುದ್ದಿಗಳು

ನ.30-ಪುತ್ತೂರಿನಲ್ಲಿ ಕೃಷಿ ಪೂರಕ ಆವಿಷ್ಕಾರಗಳ ಪ್ರದರ್ಶನ : ಕೃಷಿಕರ ಸಭೆ

Share

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಹಾಗೂ  ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿ ಆಶ್ರಯದಲ್ಲಿ ಲಘು ಉದ್ಯೋಗ ಭಾರತಿ ಇದರ ಸಹಯೋಗದೊಂದಿಗೆ ನ.30 ಹಾಗು ಡಿ.1 ರಂದು ಕೃಷಿ ಪೂರಕ ಆವಿಷ್ಕಾರಗಳ  ಪ್ರದರ್ಶನ ಅನ್ವೇಷಣಾ-2019 ರಾಜ್ಯಮಟ್ಟದ ಕಾರ್ಯಕ್ರಮ  ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ  ನಡೆಯಲಿದೆ. ಈ ಹಿನ್ನೆಲೆಯಲ್ಲಿ  ಶುಕ್ರವಾರ ಕೃಷಿಕರ ಸಭೆ ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ  ನಡೆಯಿತು.

ಅನ್ವೇಷಣಾ-2019 ರಾಜ್ಯಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್ ನಲ್ಲಿ  ಕೃಷಿಕರ ಆವಿಷ್ಕಾರಗಳು ಹಾಗೂ ವಿದ್ಯಾರ್ಥಿಗಳ ಸಂಶೋಧನೆಗಳು ಪ್ರದರ್ಶನಗೊಳ್ಳಲಿದೆ. ಇದರ ಜೊತೆಗೆ ಕಾರ್ಯಕ್ರಮಕ್ಕೆ ಲಘು ಉದ್ಯೋಗ ಭಾರತಿಯೂ ಭಾಗವಹಿಸುವರಿಂದ ಮುಂದಿನ ದಿನಗಳಲ್ಲಿ  ಕೃಷಿಕ ಆವಿಷ್ಕಾರಗಳನ್ನು ಕೃಷಿಕರು ಆಸಕ್ತಿ ಹೊಂದಿದ್ದರೆ ಅಭಿವೃದ್ಧಿಪಡಿಸಿ  ಕೃಷಿಕರ ಹೆಸರಿನಲ್ಲಿಯೇ ಮಾರುಕಟ್ಟೆಗೆ ಬಿಡುವ ಮೂಲಕ ಕೃಷಿ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಠಿ ಮಾಡುವ ಉದ್ದೇಶ ಹೊಂದಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಕೃಷಿ ಸಂಶೋಧನೆಗಳ ಕಡೆಗೆ ಆಸಕ್ತಿ ಹುಟ್ಟಿಸುವುದು  ಈ ಮೇಳದ ಪ್ರಮುಖ ಉದ್ದೇಶವಾಗಿದೆ. ಈಗಾಗಲೇ ಸುಮಾರು 350 ಕೃಷಿ ಅನ್ವೇಷಣೆಗಳನ್ನು ಗುರುತಿಸಲಾಗಿದೆ. ಆಸಕ್ತ ಕೃಷಿಕರು ತಮ್ಮ ಸಂಶೋಧನೆಗಳನ್ನು  ಪ್ರದರ್ಶನ ಮಾಡಲು ಅವಕಾಶ ಇದೆ ಎಂದು ಸಭೆಯಲ್ಲಿ  ಮಾಹಿತಿ ನೀಡಲಾಯಿತು. ಪ್ರಮುಖವಾಗಿ ಕೃಷಿಕರು ಈ ಕಾರ್ಯಕ್ರಮಕ್ಕೆ ಆಗಮಿಸಿ ಕೃಷಿ ಸಂಶೋಧನೆಗಳನ್ನು  ಪ್ರೋತ್ಸಾಹಿಸುವುದು ಹಾಗೂ ಅಭಿವೃದ್ಧಿಗೆ ಸಲಹೆ ನೀಡಬೇಕಾಗಿದೆ, ಈ ಕಾರಣದಿಂದ ಹೆಚ್ಚಿನ ಕೃಷಿಕರು ಕಾರ್ಯಕ್ರಮಕ್ಕೆ ಬರುವಂತೆ ಮಾಹಿತಿ ನೀಡಬೇಕು ಎಂದು ಸಭೆಯಲ್ಲಿ  ತಿಳಿಸಲಾಯಿತು.

ಸಭೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಇ.ಶಿವಪ್ರಸಾದ್ ,  ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ  ಶಿವಪ್ರಕಾಶ್ ಎಂ, ಸಂಚಾಲಕರಾದ  ಮುರಳೀಧರ ಕೆ, ಸದಸ್ಯರಾದ  ಭರತ್ ಪೈ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಆರ್ ಸಿ ನಾರಾಯಣ ರೆಂಜ , ಅಡಿಕೆ ಪತ್ರಿಕೆಯ ಸಂಪಾದಕರಾದ ನಾ. ಕಾರಂತ ಪೆರಾಜೆ ಮೊದಲಾದವರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

1 hour ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

13 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

14 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

21 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago