Advertisement
ಸುದ್ದಿಗಳು

ನ.30-ಪುತ್ತೂರಿನಲ್ಲಿ ಕೃಷಿ ಪೂರಕ ಆವಿಷ್ಕಾರಗಳ ಪ್ರದರ್ಶನ : ಕೃಷಿಕರ ಸಭೆ

Share

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಹಾಗೂ  ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿ ಆಶ್ರಯದಲ್ಲಿ ಲಘು ಉದ್ಯೋಗ ಭಾರತಿ ಇದರ ಸಹಯೋಗದೊಂದಿಗೆ ನ.30 ಹಾಗು ಡಿ.1 ರಂದು ಕೃಷಿ ಪೂರಕ ಆವಿಷ್ಕಾರಗಳ  ಪ್ರದರ್ಶನ ಅನ್ವೇಷಣಾ-2019 ರಾಜ್ಯಮಟ್ಟದ ಕಾರ್ಯಕ್ರಮ  ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ  ನಡೆಯಲಿದೆ. ಈ ಹಿನ್ನೆಲೆಯಲ್ಲಿ  ಶುಕ್ರವಾರ ಕೃಷಿಕರ ಸಭೆ ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ  ನಡೆಯಿತು.

ಅನ್ವೇಷಣಾ-2019 ರಾಜ್ಯಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್ ನಲ್ಲಿ  ಕೃಷಿಕರ ಆವಿಷ್ಕಾರಗಳು ಹಾಗೂ ವಿದ್ಯಾರ್ಥಿಗಳ ಸಂಶೋಧನೆಗಳು ಪ್ರದರ್ಶನಗೊಳ್ಳಲಿದೆ. ಇದರ ಜೊತೆಗೆ ಕಾರ್ಯಕ್ರಮಕ್ಕೆ ಲಘು ಉದ್ಯೋಗ ಭಾರತಿಯೂ ಭಾಗವಹಿಸುವರಿಂದ ಮುಂದಿನ ದಿನಗಳಲ್ಲಿ  ಕೃಷಿಕ ಆವಿಷ್ಕಾರಗಳನ್ನು ಕೃಷಿಕರು ಆಸಕ್ತಿ ಹೊಂದಿದ್ದರೆ ಅಭಿವೃದ್ಧಿಪಡಿಸಿ  ಕೃಷಿಕರ ಹೆಸರಿನಲ್ಲಿಯೇ ಮಾರುಕಟ್ಟೆಗೆ ಬಿಡುವ ಮೂಲಕ ಕೃಷಿ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಠಿ ಮಾಡುವ ಉದ್ದೇಶ ಹೊಂದಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಕೃಷಿ ಸಂಶೋಧನೆಗಳ ಕಡೆಗೆ ಆಸಕ್ತಿ ಹುಟ್ಟಿಸುವುದು  ಈ ಮೇಳದ ಪ್ರಮುಖ ಉದ್ದೇಶವಾಗಿದೆ. ಈಗಾಗಲೇ ಸುಮಾರು 350 ಕೃಷಿ ಅನ್ವೇಷಣೆಗಳನ್ನು ಗುರುತಿಸಲಾಗಿದೆ. ಆಸಕ್ತ ಕೃಷಿಕರು ತಮ್ಮ ಸಂಶೋಧನೆಗಳನ್ನು  ಪ್ರದರ್ಶನ ಮಾಡಲು ಅವಕಾಶ ಇದೆ ಎಂದು ಸಭೆಯಲ್ಲಿ  ಮಾಹಿತಿ ನೀಡಲಾಯಿತು. ಪ್ರಮುಖವಾಗಿ ಕೃಷಿಕರು ಈ ಕಾರ್ಯಕ್ರಮಕ್ಕೆ ಆಗಮಿಸಿ ಕೃಷಿ ಸಂಶೋಧನೆಗಳನ್ನು  ಪ್ರೋತ್ಸಾಹಿಸುವುದು ಹಾಗೂ ಅಭಿವೃದ್ಧಿಗೆ ಸಲಹೆ ನೀಡಬೇಕಾಗಿದೆ, ಈ ಕಾರಣದಿಂದ ಹೆಚ್ಚಿನ ಕೃಷಿಕರು ಕಾರ್ಯಕ್ರಮಕ್ಕೆ ಬರುವಂತೆ ಮಾಹಿತಿ ನೀಡಬೇಕು ಎಂದು ಸಭೆಯಲ್ಲಿ  ತಿಳಿಸಲಾಯಿತು.

Advertisement

ಸಭೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಇ.ಶಿವಪ್ರಸಾದ್ ,  ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ  ಶಿವಪ್ರಕಾಶ್ ಎಂ, ಸಂಚಾಲಕರಾದ  ಮುರಳೀಧರ ಕೆ, ಸದಸ್ಯರಾದ  ಭರತ್ ಪೈ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಆರ್ ಸಿ ನಾರಾಯಣ ರೆಂಜ , ಅಡಿಕೆ ಪತ್ರಿಕೆಯ ಸಂಪಾದಕರಾದ ನಾ. ಕಾರಂತ ಪೆರಾಜೆ ಮೊದಲಾದವರಿದ್ದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

3 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

4 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

8 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

11 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

15 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

15 hours ago