Advertisement
ಕೃಷಿ

ನ.30 ರಿಂದ ಪುತ್ತೂರಿನಲ್ಲಿ ಕೃಷಿ ಸಂಬಂಧಿತ ಆವಿಷ್ಕಾರಗಳ ವಿನೂತನ ಸ್ಪರ್ಧಾ ಉತ್ಸವ “ಅಗ್ರಿ ಟಿಂಕರಿಂಗ್ ಫೆಸ್ಟ್”

Share

ಪುತ್ತೂರು: ಕೃಷಿ ಪೂರಕ ನವೀನ ಆವಿಷ್ಕಾರಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ ನ.30 ರಿಂದ ಡಿ.1 ರವರೆಗೆ ಅನ್ವೇಷಣಾ- 2019 ಅಗ್ರಿ ಟಿಂಕರಿಂಗ್ ಫೆಸ್ಟ್ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಠಾರದಲ್ಲಿ ನಡೆಯಲಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ.) ಪುತ್ತೂರು ಹಾಗೂ ಇದರ ಅಂಗ ಸಂಸ್ಥೆಯಾದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕ ನಗರ, ತೆಂಕಿಲ ಇದರ ಜಂಟಿ ಆಶ್ರಯದಲ್ಲಿ  ಉದ್ಯೊಗ ಭಾರತಿ ಕರ್ನಾಟಕ, ಕ್ಯಾಂಪ್ಕೋ, ಪಶು ಸಂಗೋಪನಾ ಇಲಾಖೆ ಹಾಗು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಬೆಂಗಳೂರು ಇವರ ಸಹಯೊಗದೊಂದಿಗೆ ಕಾರ್ಯಕ್ರಮ ನಡೆಯಲಿದೆ. ದೇಶದ ಬೆನ್ನೆಲುಬಾದ ಕೃಷಿ ಕ್ಷೇತ್ರವು ಎದುರಿಸುತ್ತಿರುವ ಸವಾಲುಗಳಿಗೆ ಪ್ರಾಯೋಗಿಕವಾಗಿ ಪರಿಹಾರವನ್ನು ಕಂಡುಕೊಳ್ಳಲು, ಇಂದಿನ ಯುವಜನತೆಯಲ್ಲಿ ಕೃಷಿ ಕ್ಷೇತ್ರದ ಬಗ್ಗೆ ಆಸಕ್ತಿಯನ್ನು ಮೂಡಿಸಿ ಬೆಳೆಸುವ ಸಲುವಾಗಿ ವಿದ್ಯಾರ್ಥಿಗಳು ಹಾಗು ಕೃಷಿಕರು ಸೃಜನಾತ್ಮಕವಾಗಿ ತೊಡಗಿಸಿಕೊಳ್ಳಬೇಕೆಂಬ ಮೂಲ ಉದ್ದೇಶದೊಂದಿಗೆ ಈ ವಿಜ್ಞಾನ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸಂಪೂರ್ಣ ಸ್ಪರ್ಧಾ ರೂಪದಲ್ಲಿರುವ ಸದ್ರಿ ರಾಜ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ರಾಜ್ಯಾದ್ಯಂತ ಇರುವ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಪದವಿ ಕಾಲೇಜುಗಳು, ತಾಂತ್ರಿಕ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಾಗು ವಿಶೇಷವಾಗಿ ಕೃಷಿಕರಿಗೆ ಸಂಬಂಧಪಟ್ಟ ವಯೋಮಾನದ ವಿಭಾಗಗಳಲ್ಲಿ ತಾವು ಆವಿಷ್ಕರಿಸಿರುವ ಕೃಷಿ ಸಂಬಂಧಿತ ವೈಜ್ಞಾನಿಕ ಮಾದರಿಗಳನ್ನು ಪ್ರದರ್ಶಿಸಲು ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ಹಾಗೂ ಕೃಷಿಕರ ಸೃಜನಾತ್ಮಕ ಆಲೋಚನೆಗಳನ್ನು ಸಮಾಜಕ್ಕೆ ತಲುಪಿಸುವ ಗುರಿಯನ್ನು ಹೊಂದಿರುವ ಈ ಸ್ಪರ್ಧೆಯಲ್ಲಿ ಕೃಷಿಕ, ಉದ್ಯಮಿ, ಸರಕಾರದ ನೀತಿ ಸಂಯೋಜಕರು, ಮಾಧ್ಯಮ ಹಾಗೂ ಇತರ ಸಂಘ ಸಂಸ್ಥೆಗಳ ಜೊತೆಗೆ ಸಂವಾದದ ಮುಖಾಂತರ ಪ್ರಸ್ತುತ ಪಡಿಸಲು ಉತ್ತಮ ವೇದಿಕೆಯನ್ನು ಒದಗಿಸುತ್ತದೆ.

ಪ್ರಾಯೋಗಿಕವಾಗಿ ಕಾರ್ಯಗತಗೊಳಿಸಬಹುದಾದ ಅವಿಷ್ಕಾರಗಳನ್ನು ಒಂದು ವರ್ಷದ ಅವಧಿಯಲ್ಲಿ ಭಾಗವಹಿಸಿದ ಸ್ಪರ್ಧಾಳುಗಳ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿ ವಾಣಿಜ್ಯಉತ್ಪನ್ನವಾಗಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿ ಪೇಟೆಂಟ್/ IPR ಹಕ್ಕನ್ನು ಒದಗಿಸಿಕೊಡುವ ಹಾಗೂ ಯಶಸ್ವಿ ಉದ್ಯಮಿಯಾಗಿ ಬೆಳೆಯಲು ಪ್ರೇರೇಪಿಸುವ ನವೀನ ಯೋಚನೆಯನ್ನು ಹೊಂದಲಾಗಿದೆ.  ವಿಶೇಷವಾಗಿ ಪ್ರತಿ ವಿಭಾಗಗಳಲ್ಲಿ ಉತ್ತಮ ಎರಡು ಅವಿಷ್ಕಾರಗಳಿಗೆ ತಲಾ ಐದು ಸಾವಿರದಂತೆ ನಗದು ಬಹುಮಾನವನ್ನು ನೀಡಲಾಗುತ್ತಿದೆ.  ಪ್ರಸ್ತುತ ಸುಮಾರು 300 ಯೋಜನೆಗಳು ನೋಂದಾವಣೆ ಆಗಿದ್ದು ಸ್ಪರ್ಧೆಯು ಹಲವು ಕೃಷಿ ಸಂಬಂಧಿತ ಆವಿಷ್ಕಾರಗಳಿಗೆ ನಾಂದಿಯನ್ನು ಹಾಡಲಿರುತ್ತದೆ. ಮೇಳದಲ್ಲಿ ನಿಖರ ಕೃಷಿ, ಬಯೋ ಗ್ಯಾಸ್ ಬ್ಯಾಗ್ ರೀತಿಯ ಹಲವಾರು ಸೃಜನಾತ್ಮಕ ಕೃಷಿ ಸಂಬಂಧಿತ ಪ್ರದರ್ಶನಗಳನ್ನು ಆಯೋಜಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

40 minutes ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

8 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

8 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

8 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

17 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

17 hours ago