ಪುತ್ತೂರು: ಕಹಳೆ ನ್ಯೂಸ್ ಮುಖ್ಯಸ್ಥ ಹಾಗೂ ಹವ್ಯಾಸಿ ಅಂಕಣಕಾರ ಶ್ಯಾಮಸುದರ್ಶನ ಹೊಸಮೂಲೆಯವರು ರಚಿಸಿದ ‘ತುಳುವರ ಸಂಗ್ರಾಮ – ಕರವಾಳಿ ಸ್ವಾತಂತ್ರ್ಯದ ಹೆಜ್ಜೆ ಗುರುತು’ ಕೃತಿಯ ಅನಾವರಣ ಕಾರ್ಯಕ್ರಮವು ನ.30 ರಂದು ಪುತ್ತೂರು ಬ್ಲಡ್ ಬ್ಯಾಂಕ್ ಬಳಿಯ ರೋಟರಿ ಟ್ರಸ್ಟ್ ಹಾಲ್ ನಲ್ಲಿ ನಡೆಯಲಿದೆ. ಪುತ್ತೂರಿನ ಇನ್ನರ್ ವ್ಹೀಲ್ ಕ್ಲಬ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ.
ಖ್ಯಾತ ಪತ್ರಕರ್ತ, ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆಯವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಕೃತಿ ಪರಿಚಯ ಮಾಡಲಿದ್ದಾರೆ. ಅತಿಥಿಗಳಾಗಿ ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ದೀನ್ ಸಂಪ್ಯ, ಖ್ಯಾತ ನ್ಯಾಯವಾದಿ ಮಹೇಶ್ ಕಜೆ, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸಹನಾ ಭವಿನ್ ಭಾಗವಹಿಸಲಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel