Advertisement
ಸುದ್ದಿಗಳು

ಪಂಚಾಯತ್ ಸದಸ್ಯರು, ಅಧಿಕಾರಿಗಳ ಗೈರಿಗೆ ಬೆಳ್ಳಾರೆ ಗ್ರಾಮಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Share

ಬೆಳ್ಳಾರೆ: ಬೆಳ್ಳಾರೆ ಗ್ರಾಮ ಪಂಚಾಯತ್  2019-20ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್ ಅಧ್ಯಕ್ಷತೆಯಲ್ಲಿ ರಾಜೀವ್‍ಗಾಂಧಿ ಸೇವಾ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.
ಸಭೆಯ ಪ್ರಾರಂಭದಲ್ಲಿ ಗ್ರಾಮಸ್ಥ ಪ್ರೇಮಚಂದ್ರ ಬೆಳ್ಳಾರೆ ಮಾತನಾಡಿ ಪ್ರತೀ ಬಾರಿಯೂ ಗ್ರಾಮಸಭೆಗೆ ಕೆಲವು ಸದಸ್ಯರು, ಅಧಿಕಾರಿಗಳು ಗೈರಾಗುತ್ತಿದ್ದು, ಸದಸ್ಯರು ಸಾರ್ವಜನಿಕರ ಸಮಸ್ಯೆ ಆಲಿಸಲು ಸಂಪರ್ಕಕ್ಕೆ ಸತತ ಸಿಗುವುದಿಲ್ಲ. ನಮ್ಮ ಕೆಲವು ವಾರ್ಡ್ ಸಮಸ್ಯೆಗಳನ್ನು ನಾವು ಯಾರಿಗೆ ಮನವರಿಕೆ ಮಾಡಬೇಕೆಂದು ತೋಚುತ್ತಿಲ್ಲವೆಂದರು. ಇದಕ್ಕೆ ದನಿಗೂಡಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟಕ ಸಂಚಾಲಕ ಆನಂದ ಬೆಳ್ಳಾರೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಪಂಚಾಯತ್ ಮಾಜಿ ಸದಸ್ಯ ಅನಿಲ್ ರೈ ಚಾವಡಿಬಾಗಿಲು ಮಾತನಾಡಿ ಪದೇ ಪದೇ ಬೆಳ್ಳಾರೆಯಲ್ಲಿ ಪಾರ್ಕಿಂಗ್ ಸಮಸ್ಯೆ ತಲೆದೂರುತ್ತಿದ್ದು, ಈ ಹಿಂದೆ ಪೊಲೀಸರ ಮೂಲಕ ಪಾರ್ಕಿಂಗ್ ವ್ಯವಸ್ಥೆ ನಿರ್ಣಯಿಸಲು ನಿಶ್ಚಯಿಸಲಾಗಿತ್ತು. ಆದರೆ ತಡೆಹಿಡಿದಿರುವುದು ಏಕೆಂದು ಪ್ರಶ್ನಿಸಿದರು. ಜೊತೆಗೆ ಹಳೆಯ ಆರೋಗ್ಯ ಕೇಂದ್ರದ ಕಟ್ಟಡ ಶಿಥಿಲವಾಗಿದ್ದು, ಸುಳ್ಯ ತಹಶೀಲ್ದಾರರು ತೆರವುಗೊಳಿಸಲು ಆದೇಶಿಸಿದ್ದಾರೆ. ಆದರೆ ಇದುವರೆಗೂ ತೆರವುಗೊಂಡಿಲ್ಲದುದರಿಂದ ಮುಂದಿನ ದಿನಗಳಲ್ಲಿ ಬೆಳ್ಳಾರೆ ಸಾರ್ವಜನಿಕರೇ ಇದನ್ನು ತೆರವುಗೊಳಿಸಲಿದ್ದೇವೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಿಡಿಒ ಧನಂಜಯ್ 25ದಿನಗಳೊಳಗೆ ಹಳೆ ಆಸ್ಪತ್ರೆ ಕಟ್ಟಡವನ್ನು ತೆರವುಗೊಳಿಸುತ್ತೇವೆ ಎಂದರು.

ಬೆಳ್ಳಾರೆ ವ್ಯಾಪ್ತಿಯಲ್ಲಿ 1ಲಕ್ಷ 85ಸಾವಿರ ರೂಪಾಯಿ ವೆಚ್ಚದಲ್ಲಿ ಬೀದಿ ದೀಪಗಳನ್ನು ಹೊಸದಾಗಿ ಅಳವಡಿಸಲಾಗಿದ್ದು, ಯಾವುದೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬೆಳ್ಳಾರೆ ಗ್ರಾಮಸ್ಥರೊಬ್ಬರು ತಮ್ಮ ಅಸಮಾಧಾನವನ್ನು ಹೊರಹಾಕಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಿಡಿಒ ಧನಂಜಯ್ ಹೊಸ ಸೆಟ್ ಗಳನ್ನು ಖರೀದಿಸಿದ್ದಕೆ ವ್ಯಾರೆಂಟಿ ಇದ್ದು, ಅದರ ಮೂಲಕ ಸೊತ್ತನ್ನು ಮರುಹೊಂದಿಸಲಾಗುವುದು ಎಂದರು.

ಅಂಗಡಿಗಳ ಪರವಾನಿಗೆ ನವೀಕರಣದ ದಿಢೀರ್ ಬೆಲೆ ಏರಿಕೆಗೆ ವಿರೋಧ: 
ಪಂಚಾಯತ್ ವತಿಯಿಂದ ಬೆಳ್ಳಾರೆಯ ಎಲ್ಲಾ ಅಂಗಡಿಗಳ ಮರು ನವೀಕರಣದ ಶುಲ್ಕವನ್ನು ದಿಢೀರಾಗಿ ಅತಿಯಾಗಿ ಏರಿಕೆ ಮಾಡಿದ್ದರಿಂದ ತೀವ್ರ ಆಕ್ರೋಶಗೊಂಡಿದ್ದ ಬೆಳ್ಳಾರೆ ವರ್ತಕರ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಕುಂಟುಪುಣಿಗುತ್ತು ಸಹಿತ ಸದಸ್ಯರು  ವಿರೋಧಿಸಿದರು. ಈ ಸಂದರ್ಭ ಮಾತನಾಡಿದ ಪಿಡಿಒ ಅವರು ಈಗಾಗಲೇ ಕೆಲವು ಅಂಗಡಿಗಳ ಪರವಾನಿಗೆ ಮರುನವೀಕರಣದ ಶುಲ್ಕವನ್ನು ಇಳಿಕೆ ಮಾಡಲಾಗಿದೆ. ಬೆಳ್ಳಾರೆ ವರ್ತಕರ ಸಂಘದವರು ಅಭಿವೃದ್ದಿಗೆ ಸಹಕರಿಸಿದಷ್ಟು ಒಳ್ಳೆಯದಾಗುತ್ತದೆ ಎಂದರು.

ಕಸ ವಿಲೇವಾರಿಯಲ್ಲಿ ಅಸಮರ್ಪಕತೆ ಕಂಡುಬರುತ್ತಿರುವ ಕುರಿತು ಬೆಳ್ಳಾರೆ ವರ್ತಕರ ಸಂಘದ ಸದಸ್ಯ ವಿನಯ್ ಭಾರದ್ವಾಜ್ ಪ್ರಶ್ನಿಸಿದಾಗ ಉತ್ತರಿಸಿದ ಪಂಚಾಯತ್ ಕಾರ್ಯದರ್ಶಿ  ಕಸವನ್ನು ಸಮರ್ಪಕ ವಿಧಾನದಲ್ಲಿ ನೀಡದಿರುವುದು ಜನರೆ. ಒಣಕಸ, ಹಸಿಕಸವನ್ನು ಮಿಶ್ರಣ ಮಾಡಿ ಕೊಡುವುದರಿಂದ ತೊಂದರೆಯಾಗುತ್ತಿದೆ ಎಂದರು.

ವೇದಿಕೆಯಲ್ಲಿ ನೊಡೆಲ್ ಅಧಿಕಾರಿ ಮೋಹನ್ ನಂಗಾರು, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಸ್ತಫಾ, ಮಾಜಿ ಉಪಾಧ್ಯಕ್ಷ ವಿಠಲ್‍ದಾಸ್ ಎನ್‍ಎಸ್‍ಡಿ, ಪಂಚಾಯತ್ ರಾಜ್ ತಾಲೂಕು ಅಭಿಯಾಂತಕ ಎಸ್‍ಎಸ್.ಹುಕ್ಕೇರಿ, ಬೆಳ್ಳಾರೆ ಆರಕ್ಷಕ ಠಾಣೆಯ ಎಎಸ್‍ಐ ಮಧು, ಆರೋಗ್ಯ ಅಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು. ಪಂಚಾಯತ್ ಕಾರ್ಯದರ್ಶಿ ಭವ್ಯ ವರದಿ ವಾಚಿಸಿ,ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

3 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

3 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

3 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

16 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago