Advertisement
ಕೃಷಿ

ಮೇ.6 ರಿಂದ ಪಂಜದಲ್ಲಿ ಅಡಿಕೆ ಕೌಶಲ್ಯ ತರಬೇತಿ ಶಿಬಿರ : 30 ಕ್ಕೂ ಹೆಚ್ಚು ಶಿಬಿರಾರ್ಥಿಗಳಿಂದ ಅರ್ಜಿ

Share

ಪಂಜ: ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಗುತ್ತಿಗಾರು ಮತ್ತು ಕಡಬ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಶ್ರಯದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಪಂಜದಲ್ಲಿ ಮೇ.6 ರಿಂದ 10 ರವರೆಗೆ ಅಡಿಕೆ ಮರ ಏರುವ ಕೌಶಲ್ಯ ಸ್ವ ಉದ್ಯೋಗ  ತರಬೇತಿ ಶಿಬಿರ ನಡೆಯಲಿದೆ. ಈಗಾಗಲೇ ಈ ಶಿಬಿರಕ್ಕೆ 30 ಅರ್ಜಿಗಳು ಬಂದಿದ್ದು , ಇನ್ನೂ ಒಂದೆರಡು ಅರ್ಜಿಗಳ ನಿರೀಕ್ಷೆ ಇದೆ ಎಂದು ಪಂಜ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ತಿಳಿಸಿದ್ದಾರೆ.

ಅಡಿಕೆ ಮರ ಏರುವ ಬಗ್ಗೆ ತರಬೇತಿ ನೀಡುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ. ಈಗಾಗಲೇ ಕ್ಯಾಂಪ್ಕೋ ವತಿಯಿಂದ ವಿಟ್ಲ ಸಿ ಪಿ ಸಿ ಆರ್ ಐ ವಠಾರದಲ್ಲಿ ಎರಡು ಬಾರಿ ಯಶಸ್ವಿಯಾಗಿ ನಡೆದಿದೆ. ಆ ಬಳಿಕ ಪೆರ್ಲ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ಪೆರ್ಲದಲ್ಲಿ ತರಬೇತಿ ಶಿಬಿರ ಯಶಸ್ವಿಯಾಗಿ ನಡೆದಿದೆ.ಎರಡೂ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಪಂಜದಲ್ಲಿ 3 ಸಹಕಾರಿ ಬ್ಯಾಂಕ್ ಸಹಯೋಗದೊಂದಿಗೆ 18ರಿಂದ 40 ವರುಷದ ಒಳಗಿನ ಯುವಕರಿಗೆ ಆದ್ಯತೆ ನೀಡಿ ಈ ಶಿಬಿರ ಆಯೋಜನೆ ಮಾಡಲಾಗಿತ್ತು. ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸ್ಥಳೀಯರೂ ಅಲ್ಲದೆ ಶಿರಸಿ , ಕುಂದಾಪುರ, ಕಾಸರಗೋಡು , ಪೆರ್ಲ ಕಡೆಯಿಂದಲೂ ತರಬೇತಿ ಬಗ್ಗೆ ವಿಚಾರಣೆ ನಡಿಸಿದ್ದಾರೆ  ಎಂದು ಚಂದ್ರಶೇಖರ ಶಾಸ್ತ್ರಿ “ಸುಳ್ಯನ್ಯೂಸ್.ಕಾಂ” ಗೆ ಮಾಹಿತಿ ನೀಡಿದ್ದಾರೆ.  ಅಡಿಕೆ ಮರ ಏರುವ ಕೌಶಲ್ಯ ತರಬೇತಿ ಶಿಬಿರ ವಿವಿಧ ಪ್ರೋತ್ಸಾಹ ಸೌಲಭ್ಯ ಗಳೊಂದಿಗೆ  ಮೇ 6 ರಿಂದ10 ರ ವರೆಗೆ ಸಿ ಎ ಬ್ಯಾಂಕ್ ಪಂಜದಲ್ಲಿ ನಡೆಯುತ್ತದೆ.

ಶಿಬಿರವನ್ನು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಗೋಪಾಲಕೃಷ್ಣ ಭಟ್ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಕೃಷಿಕ ಬಿಎಂ ಆನಂದ ಗೌಡ ವಹಿಸುವರು.ಅತಿಥಿಗಳಾಗಿ ಅಡಿಕೆ ಪತ್ರಿಕೆ ಕಾರ್ಯನಿರ್ವಾಹಕ ಸಂಪಾಕ ಶ್ರೀಪಡ್ರೆ ಭಾಗವಹಿಸುವರು.

ಮೇ.10 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ಸಭಾಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಕ್ಯಾಂಪ್ಕೋ ಉಪಾಧ್ಯಕ್ಷ ಶಂ.ನಾ.ಖಂಡಿಗೆ ಭಾಗವಹಿಸುವರು.

ಪ್ರತೀ ದಿನ ಅಡಿಕೆ ಮರ ಏರುವ ತರಬೇತಿ, ಕೊಕ್ಕೆ ಕಟ್ಟುವುದು,ತಳೆ ಕಟ್ಟುವುದು, ಔಷಧಿ ಸಿಂಪಡಣೆ, ಅಡಿಕೆ ಕೊಯ್ಲು ಬಗ್ಗೆ ತರಬೇತಿಯ ಜೊತೆಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮಕ್ಕೆ ಜೇಸಿಐ ಪಂಜ ಪಂಚಶ್ರೀ ಮತ್ತು ಲಯನ್ಸ್ ಪಂಜ ಸಹಕಾರ ನೀಡುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

13 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

23 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

23 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago