ಪಂಜದಲ್ಲಿ ಅಡಿಕೆ ಕೌಶಲ್ಯ ಸ್ವ ಉದ್ಯೋಗ ತರಬೇತಿ ಶಿಬಿರ ಉದ್ಘಾಟನೆ

May 7, 2019
11:00 AM

ಪಂಜ: “ಕೃಷಿ ಉಳಿವಿಗಾಗಿ ಕೃಷಿಕರ ಮನೋಭಾವನೆಗಳು ಬದಲಾವಣೆಯಾಗಬೇಕು. ಯುವ ಜನರು ಸುರಕ್ಷಿತ ರೀತಿಯ ಕೃಷಿ ಚಟುವಟಿಕೆ ನಡೆಸಲು ಇಂತಹ ತರಬೇತಿಗಳಲ್ಲಿ ತರಬೇತಿ ಪಡೆದು ಕೃಷಿಗೆ ಉತ್ತಮ ಭವಿಷ್ಯ ನೀಡ ಬೇಕಾಗಿದೆ” ಎಂದು ಅಡಿಕೆ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ಶ್ರೀ ಪಡ್ರೆ ಹೇಳಿದರು.

ಅವರು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಲೇಗ ಪೂವಣಿ ಹೆಗ್ಡೆ ಸಭಾಭವನದಲ್ಲಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕಡಬ ಪ್ರಾಥಮಿಕ ಸಹಕಾರ ಸಂಘ ,ಜೇಸಿಐ ಪಂಜ ಪಂಚಶ್ರೀ ಮತ್ತು ಲಯನ್ಸ್ ಕ್ಲಬ್ ಪಂಜ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಅಡಿಕೆ ಕೌಶಲ್ಯ ಸ್ವ ಉದ್ಯೋಗ ತರಬೇತಿ ಶಿಬಿದಲ್ಲಿ ಮಾತನಾಡಿದರು.  ನಗರದ ಉದ್ಯೋಗಕ್ಕೆ ಹೋಗಿರುವ ಯುವಕರು ಅಲ್ಲಿಯ ಜಂಜಾಟಗಳ ಬಿಟ್ಟು ಹಳ್ಳಿ ಕಡೆ ಉದ್ಯೋಗಕ್ಕೆ ನೋಡುತ್ತಿದ್ದಾರೆ. ಈ ಸಂದರ್ಭ ಅವರಿಗೆ ಉತ್ತಮ ಕೃಷಿಯ ಸುಸಜ್ಜಿತ ತರಬೇತಿಗಳನ್ನು ನೀಡಿ ಉದ್ಯೋಗ ನೀಡಿಡುವಂತಾಗ ಬೇಕು.ಕೃಷಿ ಕಾರ್ಮಿಕರು ಪದವಿಯನ್ನು ಪಡೆದ ಸಾಫ್ಟ್ ವೇರ್ ಉದ್ಯೋಗಿಗಳಷ್ಟೇ ಆದಾಯ ಗಳಿಸಲು ಸಾಧ್ಯವಿದೆ.  ದೇಹಕ್ಕೆ ಉತ್ತಮ ವ್ಯಾಯಮ ಮತ್ತು ನೆಮ್ಮದಿಯಿದೆ ಎಂದು ಹೇಳಿದರು
ಕಾರ್ಯಕ್ರಮವನ್ನು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಉದ್ಘಾಟಿಸಿದರು.  ಕೃಷಿಕ ಹಾಗೂ ಪಂಜ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಬಿ.ಎಂ. ಆನಂದ ಗೌಡ ಸಭಾಧ್ಯಕ್ಷತೆ ವಹಿಸಿದ್ದರು. ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ,ಗುತ್ತಿಗಾರು ಪ್ರಾ.ಕೃ.ಪ.ಸ ಸಂದ ಅಧ್ಯಕ್ಷ ಕೇಶವ ಭಟ್ ,ಕಡಬ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ, ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಸುದೇವ ಮೇಲ್ಪಾಡಿ,ಪಂಜ ಲಯನ್ಸ್ ಕ್ಲಬ್ ಕೋಶಾಧ್ಯಕ್ಷ ಚೀನಪ ಕಾಣಿಕೆ, ಪಂಜ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ,ಗುತ್ತಿಗಾರು ಪ್ರಾ.ಕೃ.ಪ.ಸ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ,ಕಡಬ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಚಾಕೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗೀತಾಸುಧಾ ತೋಟ ಪ್ರಾರ್ಥಿಸಿದರು.ಚಂದ್ರಶೇಖರ ಶಾಸ್ತ್ರಿ ಸ್ವಾಗತಿಸಿದರು. ತೀರ್ಥಾನಂದ ಕೊಡೆಂಕಿರಿ ನಿರೂಪಿಸಿದರು.ಶರತ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror