ಪಂಜ: ಗ್ರಾಮ ವಿಕಾಸ ಸಮಿತಿ ಪಂಜ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸುಬ್ರಹ್ಮಣ್ಯ ಇದರ ವತಿಯಿಂದ ದಿ.ದೀಕ್ಷಿತ್ ಪಂಬೆತ್ತಾಡಿ ಹಾಗೂ ದಿ. ರಾಘವೇಂದ್ರ ಪ್ರಸಾದ್ ಅರಡ್ಕ ಇವರ ಸ್ಮರಣಾರ್ಥವಾಗಿ 6ನೇ ವರ್ಷದ ರಕ್ತದಾನ ಶಿಬಿರವು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿತು.
ಎ.ಜೆ ಆಸ್ಪತ್ರೆಯ ರಕ್ತನಿಧಿ ಮುಖ್ಯಸ್ಥ ಗೋಪಾಲಕೃಷ್ಣ ಅತಿಥಿಯಾಗಿದ್ದರು. ಕಾರ್ಯಕ್ರಮವನ್ನು ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ದೀಪ ಬೆಳಗಿದರು. ಸಭಾಧ್ಯಕ್ಷತೆಯನ್ನು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ವಹಿಸಿದ್ದರು.
ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹರ್ಷಿತ್ ಬಿ.ಸಿ.ರವರ ತಂದೆ ಮಾಜಿ ಸೈನಿಕ ಪದ್ಮನಾಭ ಬೊಳ್ಳಾಜೆ ಮತ್ತು ತಾಯಿ ವಾರಿಜಾಕ್ಷಿಯವರನ್ನು ಸನ್ಮಾನಿಸಲಾಯಿತು. ಕುಂಞಪ್ಪ ಗೌಡ ಪೆರ್ಮಾಜೆ , ಧರ್ಮಪಾಲ ನಡ್ಕ ಮೊದಲಾದವರು ಉಪಸ್ಥಿತರಿದ್ದರು.
ಭವಿತ್ ಸ್ವಾಗತಿಸಿ, ನಿರೂಪಿಸಿದರು. ಲೋಹಿತ್ ಮುಚ್ಚಾರ ನಿರೂಪಿಸಿ. ಶರತ್ ಪಂಬೆತ್ತಾಡಿ ವಂದಿಸಿದರು.
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…