ಪಂಜ: ಗ್ರಾಮ ವಿಕಾಸ ಸಮಿತಿ ಪಂಜ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸುಬ್ರಹ್ಮಣ್ಯ ಇದರ ವತಿಯಿಂದ ದಿ.ದೀಕ್ಷಿತ್ ಪಂಬೆತ್ತಾಡಿ ಹಾಗೂ ದಿ. ರಾಘವೇಂದ್ರ ಪ್ರಸಾದ್ ಅರಡ್ಕ ಇವರ ಸ್ಮರಣಾರ್ಥವಾಗಿ 6ನೇ ವರ್ಷದ ರಕ್ತದಾನ ಶಿಬಿರವು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿತು.
ಎ.ಜೆ ಆಸ್ಪತ್ರೆಯ ರಕ್ತನಿಧಿ ಮುಖ್ಯಸ್ಥ ಗೋಪಾಲಕೃಷ್ಣ ಅತಿಥಿಯಾಗಿದ್ದರು. ಕಾರ್ಯಕ್ರಮವನ್ನು ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ದೀಪ ಬೆಳಗಿದರು. ಸಭಾಧ್ಯಕ್ಷತೆಯನ್ನು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ವಹಿಸಿದ್ದರು.
ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹರ್ಷಿತ್ ಬಿ.ಸಿ.ರವರ ತಂದೆ ಮಾಜಿ ಸೈನಿಕ ಪದ್ಮನಾಭ ಬೊಳ್ಳಾಜೆ ಮತ್ತು ತಾಯಿ ವಾರಿಜಾಕ್ಷಿಯವರನ್ನು ಸನ್ಮಾನಿಸಲಾಯಿತು. ಕುಂಞಪ್ಪ ಗೌಡ ಪೆರ್ಮಾಜೆ , ಧರ್ಮಪಾಲ ನಡ್ಕ ಮೊದಲಾದವರು ಉಪಸ್ಥಿತರಿದ್ದರು.
ಭವಿತ್ ಸ್ವಾಗತಿಸಿ, ನಿರೂಪಿಸಿದರು. ಲೋಹಿತ್ ಮುಚ್ಚಾರ ನಿರೂಪಿಸಿ. ಶರತ್ ಪಂಬೆತ್ತಾಡಿ ವಂದಿಸಿದರು.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…