ಪಂಜ: ಗ್ರಾಮ ವಿಕಾಸ ಸಮಿತಿ ಪಂಜ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸುಬ್ರಹ್ಮಣ್ಯ ಇದರ ವತಿಯಿಂದ ದಿ.ದೀಕ್ಷಿತ್ ಪಂಬೆತ್ತಾಡಿ ಹಾಗೂ ದಿ. ರಾಘವೇಂದ್ರ ಪ್ರಸಾದ್ ಅರಡ್ಕ ಇವರ ಸ್ಮರಣಾರ್ಥವಾಗಿ 6ನೇ ವರ್ಷದ ರಕ್ತದಾನ ಶಿಬಿರವು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿತು.
ಎ.ಜೆ ಆಸ್ಪತ್ರೆಯ ರಕ್ತನಿಧಿ ಮುಖ್ಯಸ್ಥ ಗೋಪಾಲಕೃಷ್ಣ ಅತಿಥಿಯಾಗಿದ್ದರು. ಕಾರ್ಯಕ್ರಮವನ್ನು ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ದೀಪ ಬೆಳಗಿದರು. ಸಭಾಧ್ಯಕ್ಷತೆಯನ್ನು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ವಹಿಸಿದ್ದರು.
ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹರ್ಷಿತ್ ಬಿ.ಸಿ.ರವರ ತಂದೆ ಮಾಜಿ ಸೈನಿಕ ಪದ್ಮನಾಭ ಬೊಳ್ಳಾಜೆ ಮತ್ತು ತಾಯಿ ವಾರಿಜಾಕ್ಷಿಯವರನ್ನು ಸನ್ಮಾನಿಸಲಾಯಿತು. ಕುಂಞಪ್ಪ ಗೌಡ ಪೆರ್ಮಾಜೆ , ಧರ್ಮಪಾಲ ನಡ್ಕ ಮೊದಲಾದವರು ಉಪಸ್ಥಿತರಿದ್ದರು.
ಭವಿತ್ ಸ್ವಾಗತಿಸಿ, ನಿರೂಪಿಸಿದರು. ಲೋಹಿತ್ ಮುಚ್ಚಾರ ನಿರೂಪಿಸಿ. ಶರತ್ ಪಂಬೆತ್ತಾಡಿ ವಂದಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…