ಸುಳ್ಯ: ನಾಡಿನ ಹಿರಿಯ ಸಹಕಾರಿ, ಸಾಮಾಜಿಕ ಧುರೀಣ ಜಾಕೆ ಮಾಧವ ಗೌಡರಿಗೆ 7೦ ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಸನ್ಮಾನಿಸುವ ಜಾಕೆ ಸಪ್ತತಿ ಕಾರ್ಯಕ್ರಮ ನ.16 ರಂದು ಪಂಜದಲ್ಲಿ ನಡೆಯಿತು.
ಪಂಜ ಸಹಕಾರಿ ಸಂಘದ ಬಳಿಯಿಂದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಜಾಕೆ ಮಾಧವ ಗೌಡ ಅವರನ್ನು ಕರೆ ತರಲಾಯಿತು. ಪಂಜ ಗ್ರಾ.ಪಂ. ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ ಮೆರವಣಿಗೆಯನ್ನು ಉದ್ಘಾಟಿಸಿದರು. ಬಳಿಕ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸಮಾರಂಭವನ್ನು ಉದ್ಘಾಟಿಸಿ ಜಾಕೆ ಮಾಧವ ಗೌಡರನ್ನು ಸನ್ಮಾನಿಸಿದರು. ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ನವದೆಹಲಿ ಜವಾಹರಲಾಲ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಬಿಳಿಮಲೆ ಅಭಿನಂದನಾ ಭಾಷಣ ಮಾಡಿದರು.
ಹಿರಿಯ ಸಾಹಿತಿ ಟಿ.ಜಿ.ಮುಡೂರು, ಅಭಿನಂದನಾ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಕಾರ್ಯದರ್ಶಿ ಶಶಿಧರ ಪಳಂಗಾಯ, ಕೋಶಾಧಿಕಾರಿ ಸುರೇಶ್ಕುಮಾರ್ ನಡ್ಕ ಮತ್ತಿತರರು ಉಪಸ್ಥಿತರಿದ್ದರು.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…