ಸುಳ್ಯ: ನಾಡಿನ ಹಿರಿಯ ಸಹಕಾರಿ, ಸಾಮಾಜಿಕ ಧುರೀಣ ಜಾಕೆ ಮಾಧವ ಗೌಡರಿಗೆ 7೦ ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಸನ್ಮಾನಿಸುವ ಜಾಕೆ ಸಪ್ತತಿ ಕಾರ್ಯಕ್ರಮ ನ.16 ರಂದು ಪಂಜದಲ್ಲಿ ನಡೆಯಿತು.
ಪಂಜ ಸಹಕಾರಿ ಸಂಘದ ಬಳಿಯಿಂದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಜಾಕೆ ಮಾಧವ ಗೌಡ ಅವರನ್ನು ಕರೆ ತರಲಾಯಿತು. ಪಂಜ ಗ್ರಾ.ಪಂ. ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ ಮೆರವಣಿಗೆಯನ್ನು ಉದ್ಘಾಟಿಸಿದರು. ಬಳಿಕ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸಮಾರಂಭವನ್ನು ಉದ್ಘಾಟಿಸಿ ಜಾಕೆ ಮಾಧವ ಗೌಡರನ್ನು ಸನ್ಮಾನಿಸಿದರು. ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ನವದೆಹಲಿ ಜವಾಹರಲಾಲ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಬಿಳಿಮಲೆ ಅಭಿನಂದನಾ ಭಾಷಣ ಮಾಡಿದರು.
ಹಿರಿಯ ಸಾಹಿತಿ ಟಿ.ಜಿ.ಮುಡೂರು, ಅಭಿನಂದನಾ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಕಾರ್ಯದರ್ಶಿ ಶಶಿಧರ ಪಳಂಗಾಯ, ಕೋಶಾಧಿಕಾರಿ ಸುರೇಶ್ಕುಮಾರ್ ನಡ್ಕ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…