ಸುಳ್ಯ: ನಾಡಿನ ಹಿರಿಯ ಸಹಕಾರಿ, ಸಾಮಾಜಿಕ ಧುರೀಣ ಜಾಕೆ ಮಾಧವ ಗೌಡರಿಗೆ 7೦ ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಸನ್ಮಾನಿಸುವ ಜಾಕೆ ಸಪ್ತತಿ ಕಾರ್ಯಕ್ರಮ ನ.16 ರಂದು ಪಂಜದಲ್ಲಿ ನಡೆಯಿತು.
ಪಂಜ ಸಹಕಾರಿ ಸಂಘದ ಬಳಿಯಿಂದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಜಾಕೆ ಮಾಧವ ಗೌಡ ಅವರನ್ನು ಕರೆ ತರಲಾಯಿತು. ಪಂಜ ಗ್ರಾ.ಪಂ. ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ ಮೆರವಣಿಗೆಯನ್ನು ಉದ್ಘಾಟಿಸಿದರು. ಬಳಿಕ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸಮಾರಂಭವನ್ನು ಉದ್ಘಾಟಿಸಿ ಜಾಕೆ ಮಾಧವ ಗೌಡರನ್ನು ಸನ್ಮಾನಿಸಿದರು. ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ನವದೆಹಲಿ ಜವಾಹರಲಾಲ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಬಿಳಿಮಲೆ ಅಭಿನಂದನಾ ಭಾಷಣ ಮಾಡಿದರು.
ಹಿರಿಯ ಸಾಹಿತಿ ಟಿ.ಜಿ.ಮುಡೂರು, ಅಭಿನಂದನಾ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಕಾರ್ಯದರ್ಶಿ ಶಶಿಧರ ಪಳಂಗಾಯ, ಕೋಶಾಧಿಕಾರಿ ಸುರೇಶ್ಕುಮಾರ್ ನಡ್ಕ ಮತ್ತಿತರರು ಉಪಸ್ಥಿತರಿದ್ದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…