ಸುಳ್ಯ: ನಾಡಿನ ಹಿರಿಯ ಸಹಕಾರಿ, ಸಾಮಾಜಿಕ ಧುರೀಣ ಜಾಕೆ ಮಾಧವ ಗೌಡರಿಗೆ 7೦ ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಸನ್ಮಾನಿಸುವ ಜಾಕೆ ಸಪ್ತತಿ ಕಾರ್ಯಕ್ರಮ ನ.16 ರಂದು ಪಂಜದಲ್ಲಿ ನಡೆಯಿತು.
ಪಂಜ ಸಹಕಾರಿ ಸಂಘದ ಬಳಿಯಿಂದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಜಾಕೆ ಮಾಧವ ಗೌಡ ಅವರನ್ನು ಕರೆ ತರಲಾಯಿತು. ಪಂಜ ಗ್ರಾ.ಪಂ. ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ ಮೆರವಣಿಗೆಯನ್ನು ಉದ್ಘಾಟಿಸಿದರು. ಬಳಿಕ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸಮಾರಂಭವನ್ನು ಉದ್ಘಾಟಿಸಿ ಜಾಕೆ ಮಾಧವ ಗೌಡರನ್ನು ಸನ್ಮಾನಿಸಿದರು. ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ನವದೆಹಲಿ ಜವಾಹರಲಾಲ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಬಿಳಿಮಲೆ ಅಭಿನಂದನಾ ಭಾಷಣ ಮಾಡಿದರು.
ಹಿರಿಯ ಸಾಹಿತಿ ಟಿ.ಜಿ.ಮುಡೂರು, ಅಭಿನಂದನಾ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಕಾರ್ಯದರ್ಶಿ ಶಶಿಧರ ಪಳಂಗಾಯ, ಕೋಶಾಧಿಕಾರಿ ಸುರೇಶ್ಕುಮಾರ್ ನಡ್ಕ ಮತ್ತಿತರರು ಉಪಸ್ಥಿತರಿದ್ದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…