ಪಂಜ: ಅನಾರೋಗ್ಯ ಹಿನ್ನಲೆಯಲ್ಲಿ ಔಷಧಿ ತರಲೆಂದು ಪೇಟೆಗೆ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಪಂಜ ಸಮೀಪದ ಕೂತ್ಕುಂಜ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕೂತ್ಕುಂಜ ಕುದ್ವ ಶೇಷಪ್ಪ ಗೌಡ ನಾಪತ್ತೆಯಾದ ವ್ಯಕ್ತಿ. ಅವರು ಪಲ್ಲೋಡಿ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನಲೆಯಲ್ಲಿ ಬುಧವಾರ ಪಂಜದ ಹೊಳೆಯಲ್ಲಿ ಅವರ ಹುಡುಕಾಟ ನಡೆಯಿತು.
ಮಂಗಳವಾರ ಶೇಷಪ್ಪ ಗೌಡರು ಮೈ ಹುಷಾರಿಲ್ಲ ಎಂದು ಮನೆಯವರಲ್ಲಿ ಹೇಳಿ ಪಂಜ ಪೇಟೆಗೆ ತೆರಳಿದ್ದರು. ಬಳಿಕ ಅವರು ಮರಳಿ ಮನೆಗೆ ಬಂದಿರಲಿಲ್ಲ. ಅವರನ್ನು ಹುಡುಕುತ್ತ ಮಗ ಪಂಜದ ಕಡೆ ಹೊರಟಿದ್ದರು. ಕಾಲು ದಾರಿಯಲ್ಲಿ ಹುಡುಕುತ್ತ ಹೋಗುತಿದ್ದಾಗ ತೋಟದ ಪಕ್ಕ ಹರಿಯುವ ತೋಡಿಗೆ ಹಾಕಿದ್ದ ಮರದ ಪಾಲದ ಬದಿಗೆ ಅಳವಡಿಸಿದ ಅಡ್ಡ ತುಂಡಾಗಿ ಬಿದ್ದಿರುವುದು ಕಂಡು ಬಂದಿತ್ತು. ಸಂಶಯಗೊಂಡು ಹುಡುಕಾಟ ನಡೆಸಿದಾಗ ತೋಡಲ್ಲಿ ಅವರ ಚಪ್ಪಲಿ ಪತ್ತೆಯಾಗಿತ್ತು.
ಅವರು ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಶಂಕೆ ಹಿನ್ನಲೆಯಲ್ಲಿ ರಾತ್ರಿಯೇ ಗ್ರಹರಕ್ಷಕ ದಳದವರನ್ನು ಹಾಗೂ ಮುಳುಗು ತಜ್ಞರನ್ನು ಕರೆಯಿಸಿ ಬುಧವಾರ ಹುಡುಕಾಟ ನಡೆಸಲಾಯಿತು. ಸಂಜೆ ತನಕವೂ ಯಾವುದೇ ಸುಳಿವು ದೊರಕಿಲ್ಲ. ಸ್ಥಳಕ್ಕೆ ಸುಳ್ಯ ತಹಶೀಲ್ದಾರ್ ಕುಂಞ ಅಹಮ್ಮದ್ ಭೇಟಿ ನೀಡಿ ಮಾಹಿತಿ ಪಡೆದರು.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490