ಸುದ್ದಿಗಳು

ಪಂಜದಲ್ಲಿ ವ್ಯಕ್ತಿ ನಾಪತ್ತೆ: ನೀರು ಪಾಲಾಗಿರುವ ಸಂದೇಹ , ಮುಂದುವರಿದ ಶೋಧಕಾರ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಂಜ: ಅನಾರೋಗ್ಯ ಹಿನ್ನಲೆಯಲ್ಲಿ ಔಷಧಿ ತರಲೆಂದು ಪೇಟೆಗೆ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಪಂಜ ಸಮೀಪದ ಕೂತ್ಕುಂಜ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕೂತ್ಕುಂಜ ಕುದ್ವ ಶೇಷಪ್ಪ ಗೌಡ ನಾಪತ್ತೆಯಾದ ವ್ಯಕ್ತಿ. ಅವರು ಪಲ್ಲೋಡಿ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನಲೆಯಲ್ಲಿ ಬುಧವಾರ ಪಂಜದ ಹೊಳೆಯಲ್ಲಿ ಅವರ ಹುಡುಕಾಟ ನಡೆಯಿತು.

Advertisement

ಮಂಗಳವಾರ ಶೇಷಪ್ಪ ಗೌಡರು ಮೈ ಹುಷಾರಿಲ್ಲ ಎಂದು ಮನೆಯವರಲ್ಲಿ ಹೇಳಿ ಪಂಜ ಪೇಟೆಗೆ ತೆರಳಿದ್ದರು. ಬಳಿಕ ಅವರು ಮರಳಿ ಮನೆಗೆ ಬಂದಿರಲಿಲ್ಲ. ಅವರನ್ನು ಹುಡುಕುತ್ತ ಮಗ ಪಂಜದ ಕಡೆ ಹೊರಟಿದ್ದರು. ಕಾಲು ದಾರಿಯಲ್ಲಿ ಹುಡುಕುತ್ತ ಹೋಗುತಿದ್ದಾಗ ತೋಟದ ಪಕ್ಕ ಹರಿಯುವ ತೋಡಿಗೆ ಹಾಕಿದ್ದ ಮರದ ಪಾಲದ ಬದಿಗೆ ಅಳವಡಿಸಿದ ಅಡ್ಡ ತುಂಡಾಗಿ ಬಿದ್ದಿರುವುದು ಕಂಡು ಬಂದಿತ್ತು. ಸಂಶಯಗೊಂಡು ಹುಡುಕಾಟ ನಡೆಸಿದಾಗ ತೋಡಲ್ಲಿ ಅವರ ಚಪ್ಪಲಿ ಪತ್ತೆಯಾಗಿತ್ತು.

ಅವರು ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಶಂಕೆ  ಹಿನ್ನಲೆಯಲ್ಲಿ ರಾತ್ರಿಯೇ ಗ್ರಹರಕ್ಷಕ ದಳದವರನ್ನು ಹಾಗೂ ಮುಳುಗು ತಜ್ಞರನ್ನು ಕರೆಯಿಸಿ ಬುಧವಾರ ಹುಡುಕಾಟ ನಡೆಸಲಾಯಿತು. ಸಂಜೆ ತನಕವೂ ಯಾವುದೇ ಸುಳಿವು ದೊರಕಿಲ್ಲ. ಸ್ಥಳಕ್ಕೆ ಸುಳ್ಯ ತಹಶೀಲ್ದಾರ್ ಕುಂಞ ಅಹಮ್ಮದ್ ಭೇಟಿ ನೀಡಿ ಮಾಹಿತಿ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

22 minutes ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

3 hours ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

16 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

17 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago