ಪಂಜ: ಅನಾರೋಗ್ಯ ಹಿನ್ನಲೆಯಲ್ಲಿ ಔಷಧಿ ತರಲೆಂದು ಪೇಟೆಗೆ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಪಂಜ ಸಮೀಪದ ಕೂತ್ಕುಂಜ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕೂತ್ಕುಂಜ ಕುದ್ವ ಶೇಷಪ್ಪ ಗೌಡ ನಾಪತ್ತೆಯಾದ ವ್ಯಕ್ತಿ. ಅವರು ಪಲ್ಲೋಡಿ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನಲೆಯಲ್ಲಿ ಬುಧವಾರ ಪಂಜದ ಹೊಳೆಯಲ್ಲಿ ಅವರ ಹುಡುಕಾಟ ನಡೆಯಿತು.
ಮಂಗಳವಾರ ಶೇಷಪ್ಪ ಗೌಡರು ಮೈ ಹುಷಾರಿಲ್ಲ ಎಂದು ಮನೆಯವರಲ್ಲಿ ಹೇಳಿ ಪಂಜ ಪೇಟೆಗೆ ತೆರಳಿದ್ದರು. ಬಳಿಕ ಅವರು ಮರಳಿ ಮನೆಗೆ ಬಂದಿರಲಿಲ್ಲ. ಅವರನ್ನು ಹುಡುಕುತ್ತ ಮಗ ಪಂಜದ ಕಡೆ ಹೊರಟಿದ್ದರು. ಕಾಲು ದಾರಿಯಲ್ಲಿ ಹುಡುಕುತ್ತ ಹೋಗುತಿದ್ದಾಗ ತೋಟದ ಪಕ್ಕ ಹರಿಯುವ ತೋಡಿಗೆ ಹಾಕಿದ್ದ ಮರದ ಪಾಲದ ಬದಿಗೆ ಅಳವಡಿಸಿದ ಅಡ್ಡ ತುಂಡಾಗಿ ಬಿದ್ದಿರುವುದು ಕಂಡು ಬಂದಿತ್ತು. ಸಂಶಯಗೊಂಡು ಹುಡುಕಾಟ ನಡೆಸಿದಾಗ ತೋಡಲ್ಲಿ ಅವರ ಚಪ್ಪಲಿ ಪತ್ತೆಯಾಗಿತ್ತು.
ಅವರು ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಶಂಕೆ ಹಿನ್ನಲೆಯಲ್ಲಿ ರಾತ್ರಿಯೇ ಗ್ರಹರಕ್ಷಕ ದಳದವರನ್ನು ಹಾಗೂ ಮುಳುಗು ತಜ್ಞರನ್ನು ಕರೆಯಿಸಿ ಬುಧವಾರ ಹುಡುಕಾಟ ನಡೆಸಲಾಯಿತು. ಸಂಜೆ ತನಕವೂ ಯಾವುದೇ ಸುಳಿವು ದೊರಕಿಲ್ಲ. ಸ್ಥಳಕ್ಕೆ ಸುಳ್ಯ ತಹಶೀಲ್ದಾರ್ ಕುಂಞ ಅಹಮ್ಮದ್ ಭೇಟಿ ನೀಡಿ ಮಾಹಿತಿ ಪಡೆದರು.
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…
ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…