ನಮ್ಮೂರ ಸುದ್ದಿ

ಪಂಜದಲ್ಲಿ ಸರಕಾರಿ ಶಾಲೆ ಉಳಿಸಿ ಅಭಿಯಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಂಜ : ಸರಕಾರಿ ಶಾಲೆ ಉಳಿಸಿ ಅಭಿಯಾನದ ಅಡಿಯಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ(ಎಲ್‍ಕೆಜಿ) ಪ್ರಾರಂಭಿಸುವ ಕುರಿತು ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪಂಜ ಪೂರ್ವ ಪ್ರಾಥಮಿಕ ಶಿಕ್ಷಣ ಸಮಿತಿಯ ಸಹಯೋಗದೊಂದಿಗೆ ಸಭೆ ಪಂಜದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‍ಪಿ ಮಹಾದೇವ ಅವರು ಮಾತನಾಡಿ, 2020-2021ನೇ ಶೈಕ್ಷಣಿಕ ವರ್ಷದಲ್ಲಿ ಇದೇ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಲು ಇಲಾಖೆ ವತಿಯಿಂದ ಸರಕಾರಕ್ಕೆ  ಶಿಫಾರಸ್ಸು ಮಾಡುವುದಾಗಿ ಹಾಗೂ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

Advertisement
Advertisement

ಪ್ರಥಮ ವರ್ಷದ ತರಗತಿಗೆ 30 ವಿದ್ಯಾರ್ಥಿಗಳ ದಾಖಲಾತಿಗೊಂಡ ಕಾರಣ ಮತ್ತು ಪೋಷಕರ ಬೇಡಿಕೆಯು ಹೆಚ್ಚುತ್ತಿರುವುದರಿಂದ ಪ್ರಸ್ತುತ ವರ್ಷವೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸುವುದೆಂದು ನಿರ್ಧರಿಸಲಾಯಿತು. ಜೊತೆಗೆ ತರಗತಿಗೆ ಅರ್ಹ ಶಿಕ್ಷಕಿಯರ ಹಾಗು ಸಹಾಯಕಿಯರ ನೇಮಕಾತಿ ಪ್ರಕ್ರಿಯೆ ಪ್ರಾರಂಭಗೊಂಡಿದೆ.

ಸಭೆಯಲ್ಲಿ ಸಮಿತಿ ಸಂಚಾಲಕ ಕಾರ್ಯಪ್ಪ ಚಿದ್ಗಲ್ಲು, ಸಹಸಂಚಾಲಕ ದೇವಿಪ್ರಸಾದ್ ಜಾಕೆ, ಸೋಮಶೇಖರ ನೇರಳ, ತಿಮ್ಮಪ್ಪ ಪಲ್ಲತಡ್ಕ, ಶಶಿಧರ್ ಮಾವಿನಕಟ್ಟೆ, ದಾಮೋದರ ನೇರಳ, ವಾಚಣ್ಣ ಕರೆಮೂಲೆ, ಪುರುಷೋತ್ತಮ ನೆಕ್ಕಿಲ, ಶಿಕ್ಷಕ ಸಂಯೋಜಕ ವಸಂತ ಏನೆಕಲ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

4 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

14 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

15 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

20 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago