ಬೆಳ್ಳಾರೆ: ಕುಲಾಲ ಸುಧಾರಕ ಸೇವಾ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟವು ಪಂಜಿಗಾರಿನಲ್ಲಿ ನಡೆಯಿತು.
ಊರ ಹಿರಿಯೆ ಸೀತಮ್ಮ ಉದ್ಘಾಟಿಸಿ ಕೆಸರುಗದ್ದೆ ಕ್ರೀಡಾಕೂಟವೇ ಒಂದು ವಿಶೇಷವಾಗಿದ್ದು, ಯುವಜನಾಂಗದವರು ಹೆಚ್ಚು ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತೇಜಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಾಲ ಸುಧಾರಕ ಸೇವಾ ಸಂಘದ ಅಧ್ಯಕ್ಷ ಕೇಶವ ಕುಲಾಲ್ ಪಂಜಿಗಾರು ಅವರು ವರ್ಷಂಪ್ರತಿ ನಡೆಯುವ ಕೆಸರುಗದ್ದೆಯ ಕ್ರೀಡಾಕೂಟದಲ್ಲಿ ಸ್ವಜಾತಿ ಬಾಂಧವರು ಹೆಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು.
ವೇದಿಕೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ ಬಸ್ತಿಗುಡ್ಡೆ, ಕ್ರೀಡಾ ಕಾರ್ಯದರ್ಶಿ ಕಿರಣ್ ಅಟ್ಲೂರು, ಕ್ರೀಡಾ ತೀರ್ಪುಗಾರರಾದ ವಿಶ್ವನಾಥ.ಕೆ, ನಾಗರಾಜ್ ಜಯನಗರ ಶುಭಹಾರೈಸಿದರು. ಗಣೇಶ್ ಕುಲಾಲ್ ಸ್ವಾಗತಿಸಿ, ಕಿರಣ್ ವಂದಿಸಿದರು.
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…