ಬೆಳ್ಳಾರೆ: ಕುಲಾಲ ಸುಧಾರಕ ಸೇವಾ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟವು ಪಂಜಿಗಾರಿನಲ್ಲಿ ನಡೆಯಿತು.
ಊರ ಹಿರಿಯೆ ಸೀತಮ್ಮ ಉದ್ಘಾಟಿಸಿ ಕೆಸರುಗದ್ದೆ ಕ್ರೀಡಾಕೂಟವೇ ಒಂದು ವಿಶೇಷವಾಗಿದ್ದು, ಯುವಜನಾಂಗದವರು ಹೆಚ್ಚು ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತೇಜಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಾಲ ಸುಧಾರಕ ಸೇವಾ ಸಂಘದ ಅಧ್ಯಕ್ಷ ಕೇಶವ ಕುಲಾಲ್ ಪಂಜಿಗಾರು ಅವರು ವರ್ಷಂಪ್ರತಿ ನಡೆಯುವ ಕೆಸರುಗದ್ದೆಯ ಕ್ರೀಡಾಕೂಟದಲ್ಲಿ ಸ್ವಜಾತಿ ಬಾಂಧವರು ಹೆಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು.
ವೇದಿಕೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ ಬಸ್ತಿಗುಡ್ಡೆ, ಕ್ರೀಡಾ ಕಾರ್ಯದರ್ಶಿ ಕಿರಣ್ ಅಟ್ಲೂರು, ಕ್ರೀಡಾ ತೀರ್ಪುಗಾರರಾದ ವಿಶ್ವನಾಥ.ಕೆ, ನಾಗರಾಜ್ ಜಯನಗರ ಶುಭಹಾರೈಸಿದರು. ಗಣೇಶ್ ಕುಲಾಲ್ ಸ್ವಾಗತಿಸಿ, ಕಿರಣ್ ವಂದಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…