ಬೆಳ್ಳಾರೆ: ಕುಲಾಲ ಸುಧಾರಕ ಸೇವಾ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟವು ಪಂಜಿಗಾರಿನಲ್ಲಿ ನಡೆಯಿತು.
ಊರ ಹಿರಿಯೆ ಸೀತಮ್ಮ ಉದ್ಘಾಟಿಸಿ ಕೆಸರುಗದ್ದೆ ಕ್ರೀಡಾಕೂಟವೇ ಒಂದು ವಿಶೇಷವಾಗಿದ್ದು, ಯುವಜನಾಂಗದವರು ಹೆಚ್ಚು ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತೇಜಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಾಲ ಸುಧಾರಕ ಸೇವಾ ಸಂಘದ ಅಧ್ಯಕ್ಷ ಕೇಶವ ಕುಲಾಲ್ ಪಂಜಿಗಾರು ಅವರು ವರ್ಷಂಪ್ರತಿ ನಡೆಯುವ ಕೆಸರುಗದ್ದೆಯ ಕ್ರೀಡಾಕೂಟದಲ್ಲಿ ಸ್ವಜಾತಿ ಬಾಂಧವರು ಹೆಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು.
ವೇದಿಕೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ ಬಸ್ತಿಗುಡ್ಡೆ, ಕ್ರೀಡಾ ಕಾರ್ಯದರ್ಶಿ ಕಿರಣ್ ಅಟ್ಲೂರು, ಕ್ರೀಡಾ ತೀರ್ಪುಗಾರರಾದ ವಿಶ್ವನಾಥ.ಕೆ, ನಾಗರಾಜ್ ಜಯನಗರ ಶುಭಹಾರೈಸಿದರು. ಗಣೇಶ್ ಕುಲಾಲ್ ಸ್ವಾಗತಿಸಿ, ಕಿರಣ್ ವಂದಿಸಿದರು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…