ಬೆಳ್ಳಾರೆ: ಪಂಜಿಗಾರು ಬೊಬ್ಬೆಕೇರಿ ರಸ್ತೆಯ ದುರಸ್ಥಿಗೆ ಆಗ್ರಹಿಸಿ ಅಂಬೇಡ್ಕರ್ ತತ್ವರಕ್ಷಣಾ ವೇದಿಕೆಯ ವತಿಯಿಂದ ಪಂಜಿಗಾರಿನಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ್ ಮಾತನಾಡಿ,” ಶಾಸಕರು ಕ್ರಿಯಾಶೀಲರಾಗಿಲ್ಲ, ಯಾವುದೇ ಮನವಿಗೆ ಸ್ಪಂದಿಸುವುದಿಲ್ಲ . ಅವರ ಸುಳ್ಳು ಭರವಸೆಗಳು ನಮಗೆ ಬೇಡ. ಈ ರಸ್ತೆ ತಕ್ಷಣವೇ ದುರಸ್ತಿಯಾಗಬೇಕು ” ಎಂದರು.
ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಕುಂಞ ಅಹಮ್ಮದ್ ಮತ್ತು ಇಂಜಿನಿಯರಿಂಗ್ ಇಲಾಖೆಯ ಮಣಿಕಂಠ, ಎಸ್.ಎಸ್ ಹುಕ್ಕೇರಿ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ತಕ್ಷಣವೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಬಳಿಕ ಪ್ರತಿಭಟನೆ ಹಿಂತೆಗೆಯಲಾಯಿತು.
ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ರೈ ಪೋಲಾಜೆ ದೀಪ ಬೆಳಗಿ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ ಮುಖಂಡರಾದ ಸರಸ್ವತಿ ಕಾಮತ್, ನ್ಯಾಯವಾದಿ ಪ್ರದೀಪ್ ಕುಮಾರ್, ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಸುಂದರ ಪಾಟಾಜೆ, ಬಾಳಿಲ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹಾಗು 60 ಕ್ಕೂ ಹೆಚ್ಚು ಪ್ರತಿಭಟನಾ ಸ್ಥಳದಲ್ಲಿ ಉಪಸ್ಥಿತರಿದ್ದರು.
ಕೆ.ಕೆ ನಾಯ್ಕ್ ಪ್ರಸ್ತಾವಿಸಿದರು. ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ಸತೀಶ್ಕುಮಾರ್ ನೇತೃತ್ವದಲ್ಲಿ ಬೆಳ್ಳಾರೆ ಪೊಲೀಶ್ ಠಾಣೆಯ ಪ್ರೊಬೇಷನರಿ ಎಸ್ಐ ಆಂಜನೇಯ ರೆಡ್ಡಿ ಹಾಗೂ ಪೊಪೀಸ್ ಸಿಬ್ಬಂದಿಗಳು ಭದ್ರತಾ ವ್ಯವಸ್ಥೆಯನ್ನು ಏರ್ಪಡಿಸಿದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…