Advertisement
ಸುದ್ದಿಗಳು

ಪಂಜಿಗಾರು ಬೊಬ್ಬೆಕೇರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ : ಅಧಿಕಾರಿಗಳ ಭರವಸೆ

Share

ಬೆಳ್ಳಾರೆ: ಪಂಜಿಗಾರು ಬೊಬ್ಬೆಕೇರಿ ರಸ್ತೆಯ ದುರಸ್ಥಿಗೆ ಆಗ್ರಹಿಸಿ ಅಂಬೇಡ್ಕರ್ ತತ್ವರಕ್ಷಣಾ ವೇದಿಕೆಯ ವತಿಯಿಂದ ಪಂಜಿಗಾರಿನಲ್ಲಿ ಸೋಮವಾರ  ಪ್ರತಿಭಟನೆ ನಡೆಯಿತು.

Advertisement

ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ್ ಮಾತನಾಡಿ,” ಶಾಸಕರು ಕ್ರಿಯಾಶೀಲರಾಗಿಲ್ಲ, ಯಾವುದೇ ಮನವಿಗೆ  ಸ್ಪಂದಿಸುವುದಿಲ್ಲ . ಅವರ ಸುಳ್ಳು ಭರವಸೆಗಳು ನಮಗೆ ಬೇಡ. ಈ ರಸ್ತೆ ತಕ್ಷಣವೇ ದುರಸ್ತಿಯಾಗಬೇಕು ” ಎಂದರು. 

ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಕುಂಞ ಅಹಮ್ಮದ್  ಮತ್ತು ಇಂಜಿನಿಯರಿಂಗ್ ಇಲಾಖೆಯ ಮಣಿಕಂಠ, ಎಸ್.ಎಸ್ ಹುಕ್ಕೇರಿ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ತಕ್ಷಣವೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಬಳಿಕ ಪ್ರತಿಭಟನೆ ಹಿಂತೆಗೆಯಲಾಯಿತು.

 

 

 

ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ರೈ ಪೋಲಾಜೆ ದೀಪ ಬೆಳಗಿ ಪ್ರತಿಭಟನಾ ಸಭೆಯನ್ನು  ಉದ್ಘಾಟಿಸಿದರು.  ಸಭೆಯಲ್ಲಿ ಮುಖಂಡರಾದ ಸರಸ್ವತಿ ಕಾಮತ್, ನ್ಯಾಯವಾದಿ ಪ್ರದೀಪ್ ಕುಮಾರ್,  ಪ್ರಮೋದ್‍ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಸುಂದರ ಪಾಟಾಜೆ, ಬಾಳಿಲ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹಾಗು 60 ಕ್ಕೂ ಹೆಚ್ಚು ಪ್ರತಿಭಟನಾ ಸ್ಥಳದಲ್ಲಿ ಉಪಸ್ಥಿತರಿದ್ದರು.

ಕೆ.ಕೆ ನಾಯ್ಕ್ ಪ್ರಸ್ತಾವಿಸಿದರು. ಸುಳ್ಯ ಸರ್ಕಲ್ ಇನ್‍ಸ್ಪೆಕ್ಟರ್ ಸತೀಶ್‍ಕುಮಾರ್ ನೇತೃತ್ವದಲ್ಲಿ ಬೆಳ್ಳಾರೆ ಪೊಲೀಶ್ ಠಾಣೆಯ ಪ್ರೊಬೇಷನರಿ ಎಸ್‍ಐ ಆಂಜನೇಯ ರೆಡ್ಡಿ ಹಾಗೂ ಪೊಪೀಸ್   ಸಿಬ್ಬಂದಿಗಳು ಭದ್ರತಾ ವ್ಯವಸ್ಥೆಯನ್ನು ಏರ್ಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

2 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

3 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

13 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

18 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

18 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

1 day ago