ಬೆಳ್ಳಾರೆ: ಪಂಜಿಗಾರು ಬೊಬ್ಬೆಕೇರಿ ರಸ್ತೆಯ ದುರಸ್ಥಿಗೆ ಆಗ್ರಹಿಸಿ ಅಂಬೇಡ್ಕರ್ ತತ್ವರಕ್ಷಣಾ ವೇದಿಕೆಯ ವತಿಯಿಂದ ಪಂಜಿಗಾರಿನಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ್ ಮಾತನಾಡಿ,” ಶಾಸಕರು ಕ್ರಿಯಾಶೀಲರಾಗಿಲ್ಲ, ಯಾವುದೇ ಮನವಿಗೆ ಸ್ಪಂದಿಸುವುದಿಲ್ಲ . ಅವರ ಸುಳ್ಳು ಭರವಸೆಗಳು ನಮಗೆ ಬೇಡ. ಈ ರಸ್ತೆ ತಕ್ಷಣವೇ ದುರಸ್ತಿಯಾಗಬೇಕು ” ಎಂದರು.
ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಕುಂಞ ಅಹಮ್ಮದ್ ಮತ್ತು ಇಂಜಿನಿಯರಿಂಗ್ ಇಲಾಖೆಯ ಮಣಿಕಂಠ, ಎಸ್.ಎಸ್ ಹುಕ್ಕೇರಿ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ತಕ್ಷಣವೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಬಳಿಕ ಪ್ರತಿಭಟನೆ ಹಿಂತೆಗೆಯಲಾಯಿತು.
ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ರೈ ಪೋಲಾಜೆ ದೀಪ ಬೆಳಗಿ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ ಮುಖಂಡರಾದ ಸರಸ್ವತಿ ಕಾಮತ್, ನ್ಯಾಯವಾದಿ ಪ್ರದೀಪ್ ಕುಮಾರ್, ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಸುಂದರ ಪಾಟಾಜೆ, ಬಾಳಿಲ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹಾಗು 60 ಕ್ಕೂ ಹೆಚ್ಚು ಪ್ರತಿಭಟನಾ ಸ್ಥಳದಲ್ಲಿ ಉಪಸ್ಥಿತರಿದ್ದರು.
ಕೆ.ಕೆ ನಾಯ್ಕ್ ಪ್ರಸ್ತಾವಿಸಿದರು. ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ಸತೀಶ್ಕುಮಾರ್ ನೇತೃತ್ವದಲ್ಲಿ ಬೆಳ್ಳಾರೆ ಪೊಲೀಶ್ ಠಾಣೆಯ ಪ್ರೊಬೇಷನರಿ ಎಸ್ಐ ಆಂಜನೇಯ ರೆಡ್ಡಿ ಹಾಗೂ ಪೊಪೀಸ್ ಸಿಬ್ಬಂದಿಗಳು ಭದ್ರತಾ ವ್ಯವಸ್ಥೆಯನ್ನು ಏರ್ಪಡಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…