ಬೆಳ್ಳಾರೆ: ಪಂಜಿಗಾರು ಬೊಬ್ಬೆಕೇರಿ ರಸ್ತೆಯ ದುರಸ್ಥಿಗೆ ಆಗ್ರಹಿಸಿ ಅಂಬೇಡ್ಕರ್ ತತ್ವರಕ್ಷಣಾ ವೇದಿಕೆಯ ವತಿಯಿಂದ ಪಂಜಿಗಾರಿನಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ್ ಮಾತನಾಡಿ,” ಶಾಸಕರು ಕ್ರಿಯಾಶೀಲರಾಗಿಲ್ಲ, ಯಾವುದೇ ಮನವಿಗೆ ಸ್ಪಂದಿಸುವುದಿಲ್ಲ . ಅವರ ಸುಳ್ಳು ಭರವಸೆಗಳು ನಮಗೆ ಬೇಡ. ಈ ರಸ್ತೆ ತಕ್ಷಣವೇ ದುರಸ್ತಿಯಾಗಬೇಕು ” ಎಂದರು.
ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಕುಂಞ ಅಹಮ್ಮದ್ ಮತ್ತು ಇಂಜಿನಿಯರಿಂಗ್ ಇಲಾಖೆಯ ಮಣಿಕಂಠ, ಎಸ್.ಎಸ್ ಹುಕ್ಕೇರಿ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ತಕ್ಷಣವೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಬಳಿಕ ಪ್ರತಿಭಟನೆ ಹಿಂತೆಗೆಯಲಾಯಿತು.
ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ರೈ ಪೋಲಾಜೆ ದೀಪ ಬೆಳಗಿ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ ಮುಖಂಡರಾದ ಸರಸ್ವತಿ ಕಾಮತ್, ನ್ಯಾಯವಾದಿ ಪ್ರದೀಪ್ ಕುಮಾರ್, ಪ್ರಮೋದ್ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಸುಂದರ ಪಾಟಾಜೆ, ಬಾಳಿಲ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹಾಗು 60 ಕ್ಕೂ ಹೆಚ್ಚು ಪ್ರತಿಭಟನಾ ಸ್ಥಳದಲ್ಲಿ ಉಪಸ್ಥಿತರಿದ್ದರು.
ಕೆ.ಕೆ ನಾಯ್ಕ್ ಪ್ರಸ್ತಾವಿಸಿದರು. ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ಸತೀಶ್ಕುಮಾರ್ ನೇತೃತ್ವದಲ್ಲಿ ಬೆಳ್ಳಾರೆ ಪೊಲೀಶ್ ಠಾಣೆಯ ಪ್ರೊಬೇಷನರಿ ಎಸ್ಐ ಆಂಜನೇಯ ರೆಡ್ಡಿ ಹಾಗೂ ಪೊಪೀಸ್ ಸಿಬ್ಬಂದಿಗಳು ಭದ್ರತಾ ವ್ಯವಸ್ಥೆಯನ್ನು ಏರ್ಪಡಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…