ಬೆಳ್ಳಾರೆ: ಪಂಜ ಲಯನ್ಸ್ ಕ್ಲಬ್ ವತಿಯಿಂದ ಕಾನೂನು ಮಾಹಿತಿಗಳ ಕುರಿತು ವಿಶೇಷ ಕಾರ್ಯಕ್ರಮ ಪಂಜದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಕಾಲೇಜು ಪ್ರಾಂಶುಪಾಲ ಪ್ರಭಾಕರ ಕಿರಿಭಾಗ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ನ್ಯಾಯವಾದಿ ಮತ್ತು ನೋಟರಿ ನಳಿನ್ ಕೋಡ್ತುಗುಳಿ ಹಾಗು ಸುಬ್ರಹ್ಮಣ್ಯ ಠಾಣಾಧಿಕಾರಿ ಚಂದಪ್ಪ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕು, ರಸ್ತೆ ಸುರಕ್ಷತಾ ಕಾನೂನು, ಮಾದಕ ದ್ರವ್ಯ ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ವಿಶೇಷ ಮಾಹಿತಿ ನೀಡಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಶ್ಕುಮಾರ್ ನಡ್ಕ ವಹಿಸಿದರು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ತುಕರಾಮ ಏನೆಕಲ್, ಕಾರ್ಯದರ್ಶಿ ಶಶಿಧರ್ ಪಳಂಗಾಯ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ದೇಶಕ ಪುರುಷೋತ್ತಮ ದಂಬೆಕೋಡಿ ನಿರೂಪಿಸಿದರು.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…