ಸುಳ್ಯ: ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನಾಯಕರ ನೇತೃತ್ವದಲ್ಲಿ ಪ್ರಥಮ ಬಾರಿಗೆ ಪಂಜ ನೆಕ್ಕಿಲ ಬದ್ರಿಯಾ ಜುಮ್ಮಾ ಮಸ್ಜಿದ್ ಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಸ್ಜಿದ್ ನ ಆಡಳಿತ ಸಮಿತಿಯ ಅಧ್ಯಕ್ಷ ಉಮ್ಮರ್ ಸೀಗೆಯಡಿ ತಮ್ಮ ಮಸ್ಜಿದ್ ಮತ್ತು ಮದರಸ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಕೆಲವು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಾಗೂ ವಕ್ಫ್ ಇಲಾಖೆಯ ವತಿಯಿಂದ ಮದರಸ ಮಸೀದಿ ಗಳಿಗೆ ಬರುವ ಅನುದಾನವನ್ನು ತರಿಸುವಲ್ಲಿ ಸಹಕರಿಸಲು ಮನವಿಯನ್ನು ಮಾಡಿದರು.
ಇದಕ್ಕೆ ಸ್ಪಂದಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಸಮಿತಿ ರಚನೆ ಬಳಿಕ ಮೊಹಲ್ಲಾ ಬೇಟಿ ಕಾರ್ಯಕ್ರಮ ಇದು ಪ್ರಥಮವಾಗಿದ್ದು ಸಮಿತಿಯ ಎಲ್ಲಾ ಹಿರಿಯ ಕಿರಿಯ ನಾಯಕರ ಸಹಕಾರ ಪಡೆದು ಮೊಅಲ್ಲ ಅಭಿವೃದ್ಧಿ ಗೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಹಾಜಿ ಮುಸ್ತಫಾ ಕೆ ಎಂ,ಉಪಾಧ್ಯಕ್ಷ ಪಿ ಎ ಮಹಮ್ಮದ್, ಪ್ರ ಕಾರ್ಯದರ್ಶಿ ಇಬ್ರಾಹಿಂ ಕದಿಕ್ಕಡ್ಕ,ಎಲಿಮಲೆ ಮಸ್ಜಿದ್ ಅದ್ಯಕ್ಷ ಇಕ್ಬಾಲ್ ಎಲಿಮಲೆ, ಸಮಿತಿಯ ಕಾರ್ಯದರ್ಶಿ ಹಸೈನಾರ್ ಜಯನಗರ ಹಾಗೂ ನೆಕ್ಕಿಲ ಜುಮ್ಮಾ ಮಸ್ಜಿದ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಭಾಗವಹಿಸಿದ್ದರು. ಮಸ್ಜಿದ್ ಕಮಿಟಿಯ ವತಿಯಿಂದ ನೂತನ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ರವರಿಗೆ ಹೂ ಗುಚ್ಛ ನೀಡಿ ಗೌರವಿಸಲಾಯಿತು.
ಉಮರ್ ಸೀಗೆಯಡಿ ಸ್ವಾಗತಿಸಿ ಹಸೈನಾರ್ ಜಯನಗರ ವಂದಿಸಿದರು.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…