ಸುಳ್ಯ: ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನಾಯಕರ ನೇತೃತ್ವದಲ್ಲಿ ಪ್ರಥಮ ಬಾರಿಗೆ ಪಂಜ ನೆಕ್ಕಿಲ ಬದ್ರಿಯಾ ಜುಮ್ಮಾ ಮಸ್ಜಿದ್ ಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಸ್ಜಿದ್ ನ ಆಡಳಿತ ಸಮಿತಿಯ ಅಧ್ಯಕ್ಷ ಉಮ್ಮರ್ ಸೀಗೆಯಡಿ ತಮ್ಮ ಮಸ್ಜಿದ್ ಮತ್ತು ಮದರಸ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಕೆಲವು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಾಗೂ ವಕ್ಫ್ ಇಲಾಖೆಯ ವತಿಯಿಂದ ಮದರಸ ಮಸೀದಿ ಗಳಿಗೆ ಬರುವ ಅನುದಾನವನ್ನು ತರಿಸುವಲ್ಲಿ ಸಹಕರಿಸಲು ಮನವಿಯನ್ನು ಮಾಡಿದರು.
ಇದಕ್ಕೆ ಸ್ಪಂದಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಸಮಿತಿ ರಚನೆ ಬಳಿಕ ಮೊಹಲ್ಲಾ ಬೇಟಿ ಕಾರ್ಯಕ್ರಮ ಇದು ಪ್ರಥಮವಾಗಿದ್ದು ಸಮಿತಿಯ ಎಲ್ಲಾ ಹಿರಿಯ ಕಿರಿಯ ನಾಯಕರ ಸಹಕಾರ ಪಡೆದು ಮೊಅಲ್ಲ ಅಭಿವೃದ್ಧಿ ಗೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಹಾಜಿ ಮುಸ್ತಫಾ ಕೆ ಎಂ,ಉಪಾಧ್ಯಕ್ಷ ಪಿ ಎ ಮಹಮ್ಮದ್, ಪ್ರ ಕಾರ್ಯದರ್ಶಿ ಇಬ್ರಾಹಿಂ ಕದಿಕ್ಕಡ್ಕ,ಎಲಿಮಲೆ ಮಸ್ಜಿದ್ ಅದ್ಯಕ್ಷ ಇಕ್ಬಾಲ್ ಎಲಿಮಲೆ, ಸಮಿತಿಯ ಕಾರ್ಯದರ್ಶಿ ಹಸೈನಾರ್ ಜಯನಗರ ಹಾಗೂ ನೆಕ್ಕಿಲ ಜುಮ್ಮಾ ಮಸ್ಜಿದ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಭಾಗವಹಿಸಿದ್ದರು. ಮಸ್ಜಿದ್ ಕಮಿಟಿಯ ವತಿಯಿಂದ ನೂತನ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ರವರಿಗೆ ಹೂ ಗುಚ್ಛ ನೀಡಿ ಗೌರವಿಸಲಾಯಿತು.
ಉಮರ್ ಸೀಗೆಯಡಿ ಸ್ವಾಗತಿಸಿ ಹಸೈನಾರ್ ಜಯನಗರ ವಂದಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…