Advertisement
ಸುದ್ದಿಗಳು

ಪಂಜ ನೆಕ್ಕಿಲ ಬದ್ರಿಯಾ ಜುಮಾ ಮಸ್ಜಿದ್ ಗೆ ಭೇಟಿ

Share

ಸುಳ್ಯ: ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನಾಯಕರ ನೇತೃತ್ವದಲ್ಲಿ ಪ್ರಥಮ ಬಾರಿಗೆ ಪಂಜ ನೆಕ್ಕಿಲ ಬದ್ರಿಯಾ ಜುಮ್ಮಾ ಮಸ್ಜಿದ್ ಗೆ  ಭೇಟಿ  ನೀಡಿದರು.

ಈ ಸಂದರ್ಭದಲ್ಲಿ ಮಸ್ಜಿದ್ ನ ಆಡಳಿತ ಸಮಿತಿಯ ಅಧ್ಯಕ್ಷ  ಉಮ್ಮರ್ ಸೀಗೆಯಡಿ ತಮ್ಮ ಮಸ್ಜಿದ್ ಮತ್ತು ಮದರಸ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಕೆಲವು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಾಗೂ ವಕ್ಫ್ ಇಲಾಖೆಯ ವತಿಯಿಂದ ಮದರಸ ಮಸೀದಿ ಗಳಿಗೆ ಬರುವ ಅನುದಾನವನ್ನು ತರಿಸುವಲ್ಲಿ ಸಹಕರಿಸಲು ಮನವಿಯನ್ನು ಮಾಡಿದರು.

ಇದಕ್ಕೆ ಸ್ಪಂದಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಸಮಿತಿ ರಚನೆ ಬಳಿಕ ಮೊಹಲ್ಲಾ ಬೇಟಿ ಕಾರ್ಯಕ್ರಮ ಇದು ಪ್ರಥಮವಾಗಿದ್ದು ಸಮಿತಿಯ ಎಲ್ಲಾ ಹಿರಿಯ ಕಿರಿಯ ನಾಯಕರ ಸಹಕಾರ ಪಡೆದು ಮೊಅಲ್ಲ ಅಭಿವೃದ್ಧಿ ಗೆ ಶ್ರಮಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಹಾಜಿ ಮುಸ್ತಫಾ ಕೆ ಎಂ,ಉಪಾಧ್ಯಕ್ಷ ಪಿ ಎ ಮಹಮ್ಮದ್, ಪ್ರ ಕಾರ್ಯದರ್ಶಿ ಇಬ್ರಾಹಿಂ ಕದಿಕ್ಕಡ್ಕ,ಎಲಿಮಲೆ ಮಸ್ಜಿದ್ ಅದ್ಯಕ್ಷ ಇಕ್ಬಾಲ್ ಎಲಿಮಲೆ, ಸಮಿತಿಯ ಕಾರ್ಯದರ್ಶಿ ಹಸೈನಾರ್ ಜಯನಗರ ಹಾಗೂ ನೆಕ್ಕಿಲ ಜುಮ್ಮಾ ಮಸ್ಜಿದ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಭಾಗವಹಿಸಿದ್ದರು. ಮಸ್ಜಿದ್ ಕಮಿಟಿಯ ವತಿಯಿಂದ ನೂತನ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ರವರಿಗೆ ಹೂ ಗುಚ್ಛ ನೀಡಿ ಗೌರವಿಸಲಾಯಿತು.

ಉಮರ್ ಸೀಗೆಯಡಿ ಸ್ವಾಗತಿಸಿ ಹಸೈನಾರ್ ಜಯನಗರ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago