ಸುಳ್ಯ: ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನಾಯಕರ ನೇತೃತ್ವದಲ್ಲಿ ಪ್ರಥಮ ಬಾರಿಗೆ ಪಂಜ ನೆಕ್ಕಿಲ ಬದ್ರಿಯಾ ಜುಮ್ಮಾ ಮಸ್ಜಿದ್ ಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಸ್ಜಿದ್ ನ ಆಡಳಿತ ಸಮಿತಿಯ ಅಧ್ಯಕ್ಷ ಉಮ್ಮರ್ ಸೀಗೆಯಡಿ ತಮ್ಮ ಮಸ್ಜಿದ್ ಮತ್ತು ಮದರಸ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಕೆಲವು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಾಗೂ ವಕ್ಫ್ ಇಲಾಖೆಯ ವತಿಯಿಂದ ಮದರಸ ಮಸೀದಿ ಗಳಿಗೆ ಬರುವ ಅನುದಾನವನ್ನು ತರಿಸುವಲ್ಲಿ ಸಹಕರಿಸಲು ಮನವಿಯನ್ನು ಮಾಡಿದರು.
ಇದಕ್ಕೆ ಸ್ಪಂದಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಸಮಿತಿ ರಚನೆ ಬಳಿಕ ಮೊಹಲ್ಲಾ ಬೇಟಿ ಕಾರ್ಯಕ್ರಮ ಇದು ಪ್ರಥಮವಾಗಿದ್ದು ಸಮಿತಿಯ ಎಲ್ಲಾ ಹಿರಿಯ ಕಿರಿಯ ನಾಯಕರ ಸಹಕಾರ ಪಡೆದು ಮೊಅಲ್ಲ ಅಭಿವೃದ್ಧಿ ಗೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಹಾಜಿ ಮುಸ್ತಫಾ ಕೆ ಎಂ,ಉಪಾಧ್ಯಕ್ಷ ಪಿ ಎ ಮಹಮ್ಮದ್, ಪ್ರ ಕಾರ್ಯದರ್ಶಿ ಇಬ್ರಾಹಿಂ ಕದಿಕ್ಕಡ್ಕ,ಎಲಿಮಲೆ ಮಸ್ಜಿದ್ ಅದ್ಯಕ್ಷ ಇಕ್ಬಾಲ್ ಎಲಿಮಲೆ, ಸಮಿತಿಯ ಕಾರ್ಯದರ್ಶಿ ಹಸೈನಾರ್ ಜಯನಗರ ಹಾಗೂ ನೆಕ್ಕಿಲ ಜುಮ್ಮಾ ಮಸ್ಜಿದ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಭಾಗವಹಿಸಿದ್ದರು. ಮಸ್ಜಿದ್ ಕಮಿಟಿಯ ವತಿಯಿಂದ ನೂತನ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ರವರಿಗೆ ಹೂ ಗುಚ್ಛ ನೀಡಿ ಗೌರವಿಸಲಾಯಿತು.
ಉಮರ್ ಸೀಗೆಯಡಿ ಸ್ವಾಗತಿಸಿ ಹಸೈನಾರ್ ಜಯನಗರ ವಂದಿಸಿದರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…