ಪಂಜ: ಜೇಸಿಐ ಪಂಜ ಪಂಚಶ್ರೀ ಇದರ ವತಿಯಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಮಾರು 25 ಸಾವಿರ ಮೌಲ್ಯದ ಪ್ರಿಂಟರ್ ಮತ್ತು ಹೊಸ ಸಾಪ್ಟ್ವೇರ್ನ್ನು ಜೇಸಿಐ ವಲಯ ಸಂಯೋಜಕ ಪುರುಷೋತ್ತಮ ಶೆಟ್ಟಿ ಅವರು ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಲಾಯಿತು.
ಈ ಸಂದರ್ಭ ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಪ್ರವೀಣ್ ಕಾಯರ, ಸಂಯೋಜಕ ಲೋಕೇಶ್ ಆಕ್ರಿಕಟ್ಟೆ, ಘಟಕದ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ, ಪೂರ್ವಾಧ್ಯಕ್ಷರಾದ ಚಂದ್ರಶೇಖರ ಕುಕ್ಕುಪುಣಿ, ಜಯರಾಮ ಕಲ್ಲಾಜೆ, ಪುರುಷೋತ್ತಮ ದಂಬೆಕೋಡಿ, ಗುರುಪ್ರಸಾದ್ ತೋಟ, ಸದಸ್ಯರಾದ ನಾಗಮಣಿ ಕೆದಿಲ, ತೀರ್ಥಪ್ರಸಾದ್ ಪಲ್ಲತ್ತಡ್ಕ, ಕೌಶಿಕ್ ಕುಳ,ಸುಧೀರ್ಕೃಷ್ಣ ,ಆರಾಧನಾ ಸಮಿತಿ ಅಧ್ಯಕ್ಷ ಚಿನ್ನಪ್ಪ ಸಂಕಡ್ಕ, ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಜಗನ್ನಾಥ ಪಲ್ಲತಡ್ಕ ಉಪಸ್ಥಿತರಿದ್ದರು.
ಅರ್ಚಕ ನಾಗರಾಜ ಎಂ ಹೆಗಡೆ ಅವರು ಪುರುಷೋತ್ತಮ ಶೆಟ್ಟಿ ಮತ್ತು ವಾಸುದೇವ ಮೇಲ್ಪಾಡಿಯವರನ್ನು ದೇವಳ ವತಿಯಿಂದ ಶಾಲು ಹೊದೆಸಿ ಗೌರವಿಸಿದರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…