ಪಂಜ: ಜೇಸಿಐ ಪಂಜ ಪಂಚಶ್ರೀ ಇದರ ವತಿಯಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಮಾರು 25 ಸಾವಿರ ಮೌಲ್ಯದ ಪ್ರಿಂಟರ್ ಮತ್ತು ಹೊಸ ಸಾಪ್ಟ್ವೇರ್ನ್ನು ಜೇಸಿಐ ವಲಯ ಸಂಯೋಜಕ ಪುರುಷೋತ್ತಮ ಶೆಟ್ಟಿ ಅವರು ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಲಾಯಿತು.
ಈ ಸಂದರ್ಭ ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಪ್ರವೀಣ್ ಕಾಯರ, ಸಂಯೋಜಕ ಲೋಕೇಶ್ ಆಕ್ರಿಕಟ್ಟೆ, ಘಟಕದ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ, ಪೂರ್ವಾಧ್ಯಕ್ಷರಾದ ಚಂದ್ರಶೇಖರ ಕುಕ್ಕುಪುಣಿ, ಜಯರಾಮ ಕಲ್ಲಾಜೆ, ಪುರುಷೋತ್ತಮ ದಂಬೆಕೋಡಿ, ಗುರುಪ್ರಸಾದ್ ತೋಟ, ಸದಸ್ಯರಾದ ನಾಗಮಣಿ ಕೆದಿಲ, ತೀರ್ಥಪ್ರಸಾದ್ ಪಲ್ಲತ್ತಡ್ಕ, ಕೌಶಿಕ್ ಕುಳ,ಸುಧೀರ್ಕೃಷ್ಣ ,ಆರಾಧನಾ ಸಮಿತಿ ಅಧ್ಯಕ್ಷ ಚಿನ್ನಪ್ಪ ಸಂಕಡ್ಕ, ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಜಗನ್ನಾಥ ಪಲ್ಲತಡ್ಕ ಉಪಸ್ಥಿತರಿದ್ದರು.
ಅರ್ಚಕ ನಾಗರಾಜ ಎಂ ಹೆಗಡೆ ಅವರು ಪುರುಷೋತ್ತಮ ಶೆಟ್ಟಿ ಮತ್ತು ವಾಸುದೇವ ಮೇಲ್ಪಾಡಿಯವರನ್ನು ದೇವಳ ವತಿಯಿಂದ ಶಾಲು ಹೊದೆಸಿ ಗೌರವಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…