ಪಂಜ ಲಯನ್ಸ್ ಕ್ಲಬ್ ವತಿಯಿಂದ ಭತ್ತದ ಬೆಳೆಯ ಕೊಯ್ಲು ಪ್ರಾತ್ಯಕ್ಷಿಕೆ

December 5, 2019
9:47 PM

ಸುಳ್ಯ: ಪಂಜ ಲಯನ್ಸ್ ಕ್ಲಬ್ ಇದರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆಯ ಎಣ್ಮೂರಿನಲ್ಲಿ ವಿದ್ಯಾರ್ಥಿಗಳಿಗೆ ಭತ್ತದ ಬೆಳೆಯ ಕಟಾವಿನ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.

ಸಾಂಪ್ರದಾಯಿಕ ಮತ್ತು ಆಧುನಿಕ ತಂತ್ರಜ್ಞಾನ ಹೀಗೆ ಎರಡು ವಿಧದಲ್ಲಿ ಭತ್ತದ ಬೆಳೆಯನ್ನು ಕಟಾವು ಮಾಡುವ ಬಗ್ಗೆ ವೀಕ್ಷಣೆಗೆ ಅವಕಾಶ ಮಾಡಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಶ್ ಕುಮಾರ್ ನಡ್ಕ ಅವರ ಭತ್ತದ ಗದ್ದೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು ಎಪ್ಪತ್ತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿಂತಿಕಲ್ಲು ಕೃಷಿ ಯಂತ್ರಧಾರೆ ಕೇಂದ್ರದ ಪ್ರಬಂಧಕರಾದ ಸಂತೋಷ್ ಸರಕಾರದ ವತಿಯಿಂದ ಕೃಷಿ ಯಂತ್ರಧಾರೆ ಕೇಂದ್ರದಲ್ಲಿ ಲಭ್ಯವಿರುವ ಕೃಷಿ ಯಂತ್ರಗಳ ಬಗ್ಗೆ ಮಾಹಿತಿಯನ್ನು ನೀಡಿದರು .

ವೇದಿಕೆಯಲ್ಲಿ ಶಿಕ್ಷಕ ಮೋಹನ್ ಎಣ್ಮೂರು, ಲಯನ್ಸ್ ಜಿಲ್ಲಾ ಸದಸ್ಯರಾದ ಜಾಕೆ ಮಾಧವ ಗೌಡ, ಎಸ್ ಡಿಎಂಸಿ ಅಧ್ಯಕ್ಷ ಮುತ್ತಪ್ಪ ಗೌಡ ಕುಳ್ಸಿಗೆ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಕರಾದ ಸಂತೋಷ್, ಉಷಾ, ಸುಮಿತ್ರಾ, ಸುಂದರ ಗೌಡ ಆರೆಂಬಿ, ಧರ್ಮಪಾಲ ನಡ್ಕ, ಸೋಮಪ್ಪ ಗೌಡ ಕುಳ್ಸಿಗೆ ಮಮತಾ ನಡ್,ಕ ಕುಸುಮಾವತಿ ಕಳುವಾಜೆ ಉಪಸ್ಥಿತರಿದ್ದರು. ಬಾಲಕೃಷ್ಣ ಗೌಡ ಕುದ್ವ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror