ಪಂಜ: ಪಂಜ ವನಿತಾ ಸಮಾಜ ಇದರ ನೂತನ ಕಟ್ಟಡ ಕಾಮಗಾರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಒಂದು ಲಕ್ಷ ರೂಪಾಯಿ ಧನಸಹಾಯವನ್ನು ಮಂಜೂರು ಮಾಡಿದ್ದಾರೆ. ಈ ಚೆಕ್ ಅನ್ನು ಪ್ರಿಯದರ್ಶಿನಿ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ ಇವರು ಮೂಲಕ ಕಟ್ಟಡ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರು ಇವರಿಗೆ ಹಸ್ತಾಂತರಿಸಿದರು. ಕಟ್ಟಡಕ್ಕೆ ಸಹಾಯಧನ ನೀಡುವಂತೆ ಇತ್ತೀಚೆಗೆ ಧರ್ಮಸ್ಥಳಕ್ಕೆ ತೆರಳಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಸಮಿತಿ ಮನವಿ ಮಾಡಿತ್ತು.
ಚೆಕ್ ವಿತರಣೆ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಪಂಜ ವಲಯ ಮೇಲ್ವಿಚಾರಕ ವಸಂತ್, ಕೂತ್ಕುಂಜ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಸಂಪ, ವನಿತಾ ಸಮಾಜದ ಅಧ್ಯಕ್ಷೆ ಚಂದ್ರಾ ಚಿದ್ಗಲ್, ಖಜಾಂಜಿ ಸತ್ಯಕಲಾ ಗುಂಡಡ್ಕ, ಸದಸ್ಯೆ ಯಶೋಧ , ಪೂರ್ಣಿಮಾ ಜಾಕೆ, ರತ್ನಾವತಿ ಸಂಕಡ್ಕ, ಸವಿತಾ ಸಂಪ, ಪ್ರತಿಮಾ ರೈ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…