ಪಂಜ: ಪಂಜ ವನಿತಾ ಸಮಾಜ ಇದರ ನೂತನ ಕಟ್ಟಡ ಕಾಮಗಾರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಒಂದು ಲಕ್ಷ ರೂಪಾಯಿ ಧನಸಹಾಯವನ್ನು ಮಂಜೂರು ಮಾಡಿದ್ದಾರೆ. ಈ ಚೆಕ್ ಅನ್ನು ಪ್ರಿಯದರ್ಶಿನಿ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ ಇವರು ಮೂಲಕ ಕಟ್ಟಡ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರು ಇವರಿಗೆ ಹಸ್ತಾಂತರಿಸಿದರು. ಕಟ್ಟಡಕ್ಕೆ ಸಹಾಯಧನ ನೀಡುವಂತೆ ಇತ್ತೀಚೆಗೆ ಧರ್ಮಸ್ಥಳಕ್ಕೆ ತೆರಳಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಸಮಿತಿ ಮನವಿ ಮಾಡಿತ್ತು.
ಚೆಕ್ ವಿತರಣೆ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಪಂಜ ವಲಯ ಮೇಲ್ವಿಚಾರಕ ವಸಂತ್, ಕೂತ್ಕುಂಜ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಸಂಪ, ವನಿತಾ ಸಮಾಜದ ಅಧ್ಯಕ್ಷೆ ಚಂದ್ರಾ ಚಿದ್ಗಲ್, ಖಜಾಂಜಿ ಸತ್ಯಕಲಾ ಗುಂಡಡ್ಕ, ಸದಸ್ಯೆ ಯಶೋಧ , ಪೂರ್ಣಿಮಾ ಜಾಕೆ, ರತ್ನಾವತಿ ಸಂಕಡ್ಕ, ಸವಿತಾ ಸಂಪ, ಪ್ರತಿಮಾ ರೈ ಉಪಸ್ಥಿತರಿದ್ದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…