ಪಂಜ: ಪಂಜ ವನಿತಾ ಸಮಾಜ ಇದರ ನೂತನ ಕಟ್ಟಡ ಕಾಮಗಾರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಒಂದು ಲಕ್ಷ ರೂಪಾಯಿ ಧನಸಹಾಯವನ್ನು ಮಂಜೂರು ಮಾಡಿದ್ದಾರೆ. ಈ ಚೆಕ್ ಅನ್ನು ಪ್ರಿಯದರ್ಶಿನಿ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ ಇವರು ಮೂಲಕ ಕಟ್ಟಡ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರು ಇವರಿಗೆ ಹಸ್ತಾಂತರಿಸಿದರು. ಕಟ್ಟಡಕ್ಕೆ ಸಹಾಯಧನ ನೀಡುವಂತೆ ಇತ್ತೀಚೆಗೆ ಧರ್ಮಸ್ಥಳಕ್ಕೆ ತೆರಳಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಸಮಿತಿ ಮನವಿ ಮಾಡಿತ್ತು.
ಚೆಕ್ ವಿತರಣೆ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಪಂಜ ವಲಯ ಮೇಲ್ವಿಚಾರಕ ವಸಂತ್, ಕೂತ್ಕುಂಜ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಸಂಪ, ವನಿತಾ ಸಮಾಜದ ಅಧ್ಯಕ್ಷೆ ಚಂದ್ರಾ ಚಿದ್ಗಲ್, ಖಜಾಂಜಿ ಸತ್ಯಕಲಾ ಗುಂಡಡ್ಕ, ಸದಸ್ಯೆ ಯಶೋಧ , ಪೂರ್ಣಿಮಾ ಜಾಕೆ, ರತ್ನಾವತಿ ಸಂಕಡ್ಕ, ಸವಿತಾ ಸಂಪ, ಪ್ರತಿಮಾ ರೈ ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…