ಪಂಜ : ಪಂಜ ಹವ್ಯಕ ವಲಯದ ವತಿಯಿಂದ ನಡೆಯುತ್ತಿದ್ದ 18 ನೇ ವರ್ಷದ ವಸಂತ ವೇದ ಶಿಬಿರ ಸಮಾರೋಪ ಸಮಾರಂಭ ನಡೆಯಿತು.
ಶಿಬಿರವು 40 ದಿನಗಳ ಕಾಲ ನಡೆದಿದ್ದು 18 ಮಂದಿ ಮಕ್ಕಳು ವೇದಾಧ್ಯಯನದಲ್ಲಿ ಪಾಲ್ಗೊಂಡಿದ್ದರು. ಶಿಬಿರ ಗುರುಗಳಾದ ವೇದಮೂರ್ತಿ ರಾಮಚಂದ್ರ ಭಟ್, ವೇದಮೂರ್ತಿ ನಾಗರಾಜ್ ಪರಮೇಶ್ವರ ಹೆಗ್ಗಡೆ ಇವರ ಮಾರ್ಗದರ್ಶನದಲ್ಲಿ ನಡೆಯಿತು.
ವೇದ ಶಿಬಿರವನ್ನು ಕಳೆದ ತಿಂಗಳು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಗೋಪಾಲಕೃಷ್ಣ ಭಟ್ ಉದ್ಘಾಟಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಪಂಜ ವಲಯದ ಅಧ್ಯಕ್ಷರು ಶ್ರೀ ಕೃಷ್ಣ ಭಟ್ ಪಟೋಳಿ, ಕಾರ್ಯದರ್ಶಿ ಪ್ರಸನ್ನ ಭಟ್ ಎಣ್ಮೂರು, ಡಾ.ಅನಂತ ಕೆದಿಲ, ಶ್ರೀಶ ಕುಮಾರ್ ಮತ್ತು ಪೋಷಕರು, ವಲಯದ ಬಂಧುಗಳಿದ್ದರು.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…