ಪಂಜ: ಜೇಸಿಐ ಪಂಜ ಪಂಚಶ್ರೀ ವತಿಯಿಂದ ಸರಕಾರಿ ಪಾಡಿಗದ್ದೆ ಶಾಲೆಯಲ್ಲಿ “ವಿಶ್ವ ಪರಿಸರ ದಿನಾಚರಣೆ ಪ್ರಯುಕ್ರ ಹಣ್ಣಿನ ಗಿಡಗಳ ವಿತರಣೆ ಹಾಗೂ ಕಳೆದ ವರುಷಗಳಲ್ಲಿ ನೆಟ್ಟ ಗಿಡಗಳಿಗೆ ಗೊಬ್ಬರ ಹಾಕಿ ಪೋಷಣೆ” ಕಾರ್ಯಕ್ರಮವು ನಡೆಯಿತು.
ಸಂಪನ್ಮೂಲ ವ್ಯಕ್ರಿ ಜೇಸಿಐ ಭಾರತದ ವಲಯ ತರಬೇತುದಾರ ರಾದ ಜೇಸಿ ತೀರ್ಥನಂದ ಕೊಡಂಕಿರಿ ಹಣ್ಣಿನ ಗಿಡವನ್ನು ಮುಖ್ಯ ಶಿಕ್ಷಕಿ ಧರ್ಮವತಿ.ಟಿ .ಇವರಿಗೆ ಹಸ್ತಾತರಿಸುವ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿ “ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಮರಗಿಡಗಳನ್ನು ನಾಶ ಮಾಡುವ ಮೂಲಕ ಪರಿಸರವನ್ನು ಹಾಳು ಮಾಡುತ್ತಿದ್ದು, ಈಗಾಗಲೇ ಎಚ್ಚೆತ್ತು ಕೊಳ್ಳದಿದ್ದರೆ ಅಲ್ಲಲಿ ಸಂಭವಿಸುತ್ತಿರುವ ಪ್ರಕೃತಿ ವಿಕೋಪದ ಜತೆಗೆ ಮತ್ತಷ್ಟು ವಿಕೋಪ ಗಳನ್ನು ಎದುರಿಸಬೇಕಾ ಗುತ್ತದೆ” ಎಂದು ಪರಿಸರದ ಉಳಿವಿನ ಮಹತ್ವವ ನ್ನು ವಿವರಿಸಿದರು.
ವೇದಿಕೆಯಲ್ಲಿ ಜೇಸಿಐ ಪಂಜ ಪಂಚಶ್ರಿಯ ಅಧ್ಯಕ್ಷರಾದ ಜೇಸಿ ವಾಸುದೇವ ಮೇಲ್ಪಾಡಿ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ವಾಚಣ್ಣ ಕೆರೆಮೂಲೆ, ಶಾಲಾ ಮುಖ್ಯ ಶಿಕ್ಷಕಿ ಧರ್ಮವತಿ.ಟಿ., ಪಂಜ ಕ್ಲಸ್ಟರ್ನ ಸಮೂಹ ಸಂಪನ್ಮೂಲ ವ್ಯಕ್ತಿ ಯಶೋಧರ.ಕೆ. ವೇದಿಕೆಯಲ್ಲಿದ್ದರು. ಮುಖ್ಯ ಶಿಕ್ಷಕಿ ಮಾತನಾಡಿ ಜೇಸಿಐ ಪಂಜ ಪಂಚಶ್ರೀಯ ಈ ಕಾರ್ಯಕ್ರಮ ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೇಸಿ ಶಿವಪ್ರಸಾದ್ ಹಾಳೆಮಜಲು ಅಥಿತಿಗಳನ್ನು ವೇದಿಕೆಗೆ ಆಹ್ವಾನಿಸಿದ ರು. ಜೇಸಿ ನಾಗಮಣಿ ಕೆದಿಲ ಜೇಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ಪ್ರವೀಣ್ ಕಾಯರ ವಂದಿಸಿದರು.
ಸ್ಥಾಪಕಾಧ್ಯಕ್ಷ ಜೇಸಿ ದೇವಿಪ್ರಸಾದ್ ಜಾಕೆ, ಜೇಸಿ ಷಣ್ಮುಖ ಕಟ್ಟ, ಶಾಲಾ ಎಸ್.ಡಿ.ಎಮ್.ಸಿ ಸದಸ್ಯರುಗಳು ಪೋಷಕರು ಹಾಗೂ ಎಲ್ಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸುಮಾರು 90 ಹಣ್ಣಿನ ಗಿಡಗಳನ್ನು ಎಲ್ಲಾ ವಿದ್ಯಾರ್ಥಿಗಳ ಮನೆಗೆ ಹಂಚಲಾಯಿತು. ಹಾಗೂ ಕಳೆದ ವರ್ಷ ನೆಟ್ಟ ಗಿಡಗಳಿಗೆ ಗೊಬ್ಬರ ಹಾಕಿ ಪೋಷಣೆ ಮಾಡಲಾಯಿತು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…